ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಎಸ್ಟೇಟ್ ಲಾಬಿ ವಿರುದ್ಧ ಒಗ್ಗೂಡಿತು ಜನಶಕ್ತಿ

ಮಲ್ಲೇಶ್ವರಂನ ಸ್ಯಾಂಕಿ ಕೆರೆಯ ವಿಹಾರಿಗಳೆಲ್ಲ ಇಂದು ಒಟ್ಟುಗೂಡಿದ್ದರು. ಅವರೊಂದಿಗೆ ಮಕ್ಕಳೂ ಸೇರಿಕೊಂಡಿದ್ದರು. ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿಮತ್ತು ಹಲವು ಸಂಘಟನೆಗಳು ಅವರ ಜತೆ ಗೂಡಿದ್ದರು. ಇವರೆಲ್ಲ ಒಟ್ಟು ಗೂಡಿದ್ದು ಸ್ಯಾಂಕಿ ಕೆರೆಯ ರಕ್ಷಣೆಗಾಗಿ...

ಬೆಂಗಳೂರು: ಮಲ್ಲೇಶ್ವರಂನ ಸ್ಯಾಂಕಿ ಕೆರೆಯ ವಿಹಾರಿಗಳೆಲ್ಲ ಇಂದು ಒಟ್ಟುಗೂಡಿದ್ದರು. ಅವರೊಂದಿಗೆ ಮಕ್ಕಳೂ ಸೇರಿಕೊಂಡಿದ್ದರು. ಸ್ವಾತಂತ್ರ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಮತ್ತು ಹಲವು ಸಂಘಟನೆಗಳು ಅವರ ಜತೆ ಗೂಡಿದ್ದರು.

ಇವರೆಲ್ಲ ಒಟ್ಟು ಗೂಡಿದ್ದು ಸ್ಯಾಂಕಿ ಕೆರೆಯ ರಕ್ಷಣೆಗಾಗಿ. ಸ್ಯಾಂಕಿ ಕೆರೆಯನ್ನು ರಿಯಲ್ ಎಸ್ಟೇಟ್ ಕುಳಗಳಿಂದ ರಕ್ಷಿಸಲು ಆಗ್ರಹಿಸಿ ‘ಸೇವ್ ಸ್ಯಾಂಕಿ ಫಾರಂ’ ಆಶ್ರಯದಲ್ಲಿ ಶನಿವಾರ ಒಟ್ಟುಗೂಡಿದ್ದ ಇವರೆಲ್ಲರೂ, ಕೆರೆ ಅಂಗಳದಲ್ಲಿ ಬೃಹತ್ ಪ್ರತಿಭಟನೆಯನ್ನೇ ನಡೆಸಿದರು.

ಸ್ಯಾಂಕಿ ಕೆರೆ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಕೆರೆಯ ರಕ್ಷಣೆಗೆ ಮುಂದಾಗದ ಸರ್ಕಾರ ಮತ್ತು ಬಿಬಿಎಂಪಿ ಧೋರಣೆ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಹೋರಾಟಗಾರ ದೂರೆಸ್ವಾಮಿ ಬೆಂಗಳೂರು ಒಂದು ಕಾಲದಲ್ಲಿ ಕೆರೆಗಳ ತವರೂರಾಗಿತ್ತು. ನಗರದಲ್ಲಿ ನೂರಾರು ಕೆರೆಗಳು ಕುಡಿಯುವ ನೀರು ಪೂರೈಸುವ ಮೂಲವಾಗಿದ್ದವು. ಅದರೀಗ ಭೂಗಳ್ಳರ ಹಣದ ದಾಹಕ್ಕೆ ಕೆರೆಗಳು ಮಾಯವಾಗಿವೆ.  ಉಳಿದಿರುವ ನಾಲ್ಕಾರು ಕೆರೆಗಳನ್ನಾದರೂ ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ ಪ್ರಾಣಿ ಮತ್ತು ಜೀವ, ಜಲಚರಗಳು ನೀರಿಗಾಗಿ ಹಾಹಾಕಾರ ಪಡಲಿವೆ," ಎಂದರು.

“ನಗರದಲ್ಲಿ ಈಗಾಗಲೇ ಅಂತರ್ಜಲ ಮಟ್ಟ ಪಾತಾಳಕ್ಕಿಳಿದು ಬೋರವೇಲ್ಧಿಗಳು ಬತ್ತುತ್ತಿವೆ. ಕೆರೆಗಳ ಒತ್ತುವರಿಯಿಂದ ನಗರ ಸೌಂದರ್ಯಕ್ಕೆ ಧಕ್ಕೆಯಾಗಿದೆ” ಎಂದು ಆಗ್ರಹಿಸಿದರು.
ಸಿಎಂ ಬಳಿ ನಿಯೋಗ: ನಂತರ ಪ್ರತಿಭಟನಾಕಾರರು ಮುಖ್ಯಮಂತ್ರಿಗಳ ಗೃಹ ಕಚೇರಿ ಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಗರದ ಕಾಡು ಮಲ್ಲೇಶ್ವರದಲ್ಲಿ 7.22 ಎಕರೆ ಜಾಗದಲ್ಲಿ ವಿಸ್ತಾರವಾಗಿ ಹರಡಿರುವ ಕೆರೆ ಸಂರಕ್ಷಿಸ ಬೇಕು. ಮಂತ್ರಿ ಡೆವಲಪರ್ಸ್ ಅತಿಕ್ರಮಿಸಿ ಕೊಂಡಿದೆ. ಕೂಡಲೇ ಇದನ್ನು ತೆರವುಗೊಳಿಸಿ ಕೆರೆ ಅಭಿವೃದ್ಧಿಗೊಳಿಸಬೇಕೆಂದು ಮನವಿ
ಸಲ್ಲಿಸಿದರು. ಮಲ್ಲೇಶ್ವರಂ ಶಾಸಕ ಅಶ್ವತ್ಥ ನಾರಾಯಣ, ಮಾಜಿ ಶಾಸಕ ನೆ.ಲ. ನರೇಂದ್ರಬಾಬು, ಮಲ್ಲೇಶ್ವರಂ ರೆಸಿಡೆಂಟ್ಸ್ ವೆಲ್ ಫಾರ್ ಅಸೋಸಿಯೇಷನ್, ಮಲ್ಲೇಶ್ವರಂ ಸ್ವಾಭಿಮಾನ ಇನಿಶಿಯೇಟಿವ್, ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಸದಸ್ಯರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT