ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಪ್ರಶಸ್ತಿ ಹಿಂತಿರುಗಿಸಿದ ಅಕ್ಷತಾ ಹುಂಚದಕಟ್ಟೆ

ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ಹಲ್ಲೆ ವಿರೋಧಿಸಿ ಲೇಖಕಿ, ಕವಿ ಅಕ್ಷತಾ ಹುಂಚದಕಟ್ಟೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ವಾಪಸು ನೀಡಲು ನಿರ್ಧರಿಸಿದ್ದಾರೆ...

ಶಿವಮೊಗ್ಗ: ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ಹಲ್ಲೆ ವಿರೋಧಿಸಿ ಲೇಖಕಿ, ಕವಿ ಅಕ್ಷತಾ ಹುಂಚದಕಟ್ಟೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ವಾಪಸು ನೀಡಲು  ನಿರ್ಧರಿಸಿದ್ದಾರೆ.

ರೈತ ಹೋರಾಟಗಾರ ಕಡಿದಾಳು ಶಾಮಣ್ಣ ಅವರ ಆತ್ಮಕಥನ ‘ಕಾಡ ತೊರೆಯ ಜಾಡು’ ಕೃತಿಯನ್ನು ನಿರೂಪಿಸಿದ್ದಕ್ಕಾಗಿ ೨೦೧೧ರಲ್ಲಿ ಅವರಿಗೆ ಪುಸ್ತಕ ಬಹುಮಾನ ಬಂದಿತ್ತು. ಈ ಹೊತ್ತು ಒಂದ ಕ್ಕೊಂದು ಕೊಂಡಿ ಬೆಸೆದಂತೆ ನಡೆಯುತ್ತಿರುವ ಮನುಷ್ಯ ವಿರೋಧಿ ಕೃತ್ಯಗಳನ್ನೂ, ಮಾನವತಾವಾದದ ಸೋಲನ್ನು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಯನ್ನು ಖಂಡಿಸಿ ಪ್ರತಿರೋಧದ ಧ್ವನಿ ಎತ್ತಿ ಪ್ರಶಸ್ತಿ ಪುರಸ್ಕಾರಗಳನ್ನು ಹಿಂದಿರುಗಿಸುತ್ತಿರುವ ಪ್ರಜ್ಞಾವಂತ ಲೇಖಕ ಬಳಗದ ಜತೆ ನನ್ನ ಧ್ವನಿಯನ್ನು ಸೇರಿಸುವುದು, ಅಂಥದೊಂದು ಚಳವಳಿಯ ಭಾಗವಾಗುವುದು ನನ್ನ ಜವಾಬ್ದಾರಿ ಎಂದಿದ್ದಾರೆ.

ಬಹುಮಾನದ ಮೊತ್ತ ರು.೫,೦೦೦ ಹಾಗೂ ಪ್ರಶಸ್ತಿ ಫಲಕವನ್ನು ಸಾಹಿತ್ಯ ಅಕಾಡೆಮಿಗೆ ವಾಪಸು ಕಳುಹಿಸಿಕೊಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT