ಚಿರತೆ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೋನಿಗೆ ಬಿದ್ದ ನರಭಕ್ಷಕ ಚಿರತೆ

ಕೆಲದಿನಗಳ ಹಿಂದೆ ವ್ಯಕ್ತಿಯೊಬ್ಬರನ್ನು ಕೊಂದು ಹಾಕಿ ಭಯ ಹುಟ್ಟಿಸಿದ್ದ ಚಿರತೆ ಭಾನುವಾರ ಬೆಳಗಿನ ಜಾವದಲ್ಲಿ ಸುಶೀಲಾನಗರದ ಹೊರವಲದಲ್ಲಿರಿಸಿದ್ದ ಬೋನಿಗೆ ಬಿದ್ದಿದೆ.

ಸಂಡೂರು: ಕೆಲದಿನಗಳ ಹಿಂದೆ ವ್ಯಕ್ತಿಯೊಬ್ಬರನ್ನು ಕೊಂದು ಹಾಕಿ ಭಯ ಹುಟ್ಟಿಸಿದ್ದ ಚಿರತೆ ಭಾನುವಾರ ಬೆಳಗಿನ ಜಾವದಲ್ಲಿ ಸುಶೀಲಾನಗರದ ಹೊರವಲದಲ್ಲಿರಿಸಿದ್ದ ಬೋನಿಗೆ ಬಿದ್ದಿದೆ.
ಮಾಬುಸಾಬ್ ಎನ್ನುವ ದನಗಾಹಿಯ ಪ್ರಾಣ ತೆಗೆದಿದ್ದ ಚಿರತೆಯ ಉಪಟಳಕ್ಕೆ ಸಾರ್ವಜನಿಕರು ಭೀತರಾಗಿದ್ದರು. ಘಟನೆ ದಿನ ಜನರು ಹೊಲಗೆಲಸಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದರು. ತಹಸೀಲ್ದಾರ್ ಸೇರಿದಂತೆ ಅರಣ್ಯ ಇಲಾಖೆಯವರ ವಿರುದಟಛಿ ಪ್ರತಿಭಟನೆಗಳು ಜರುಗಿದ್ದವು.
ಪರಿಸ್ಥಿತಿಯ ಗಂಭೀರತೆ ಅರಿತು ಎಚ್ಚೆತ್ತ ಇಲಾಖೆ ಕಬ್ಬಿಣದ ಬೋನೊಂದನ್ನು ಗ್ರಾಮದ ಹೊರವಲಯದಲ್ಲಿಟ್ಟು, ನಾಯಿ ಬಿಟ್ಟಿದ್ದರು. ಎರಡು ದಿನಗಳಿಂದ ಇದೇ ಸ್ಥಳಕ್ಕೆ ಚಿರತೆ ಬಂದಿದ್ದರೂ ಬೋನಿಗೆ ಹೊಕ್ಕಿರಲಿಲ್ಲ. ಭಾನುವಾರ ಬೋನಿಗೆ ಬಿದ್ದ ವಿಷಯವನ್ನು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ವಾಹನದಲ್ಲಿ ಹೊಸಪೇಟೆ ಬಳಿಯ ಗುಂಡಾ ಅರಣ್ಯದಲ್ಲಿರುವ ಗೆಸ್ಟ್‍ಹೌಸ್‍ಗೆ ಸಾಗಿಸಿದರು. ಬನ್ನೇರುಘಟ್ಟ ಅಥವಾ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಸಾಗಿಸುವ ಸಾಧ್ಯತೆಯಿದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಂದ ನಿರ್ದೇಶನ ಬಂದ ಆನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಉಪವಲಯ ಅರಣ್ಯಾಧಿಕಾರಿ ಉಮೇಶ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel