ಚಿರತೆ(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬೋನಿಗೆ ಬಿದ್ದ ನರಭಕ್ಷಕ ಚಿರತೆ

ಕೆಲದಿನಗಳ ಹಿಂದೆ ವ್ಯಕ್ತಿಯೊಬ್ಬರನ್ನು ಕೊಂದು ಹಾಕಿ ಭಯ ಹುಟ್ಟಿಸಿದ್ದ ಚಿರತೆ ಭಾನುವಾರ ಬೆಳಗಿನ ಜಾವದಲ್ಲಿ ಸುಶೀಲಾನಗರದ ಹೊರವಲದಲ್ಲಿರಿಸಿದ್ದ ಬೋನಿಗೆ ಬಿದ್ದಿದೆ.

ಸಂಡೂರು: ಕೆಲದಿನಗಳ ಹಿಂದೆ ವ್ಯಕ್ತಿಯೊಬ್ಬರನ್ನು ಕೊಂದು ಹಾಕಿ ಭಯ ಹುಟ್ಟಿಸಿದ್ದ ಚಿರತೆ ಭಾನುವಾರ ಬೆಳಗಿನ ಜಾವದಲ್ಲಿ ಸುಶೀಲಾನಗರದ ಹೊರವಲದಲ್ಲಿರಿಸಿದ್ದ ಬೋನಿಗೆ ಬಿದ್ದಿದೆ.
ಮಾಬುಸಾಬ್ ಎನ್ನುವ ದನಗಾಹಿಯ ಪ್ರಾಣ ತೆಗೆದಿದ್ದ ಚಿರತೆಯ ಉಪಟಳಕ್ಕೆ ಸಾರ್ವಜನಿಕರು ಭೀತರಾಗಿದ್ದರು. ಘಟನೆ ದಿನ ಜನರು ಹೊಲಗೆಲಸಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದರು. ತಹಸೀಲ್ದಾರ್ ಸೇರಿದಂತೆ ಅರಣ್ಯ ಇಲಾಖೆಯವರ ವಿರುದಟಛಿ ಪ್ರತಿಭಟನೆಗಳು ಜರುಗಿದ್ದವು.
ಪರಿಸ್ಥಿತಿಯ ಗಂಭೀರತೆ ಅರಿತು ಎಚ್ಚೆತ್ತ ಇಲಾಖೆ ಕಬ್ಬಿಣದ ಬೋನೊಂದನ್ನು ಗ್ರಾಮದ ಹೊರವಲಯದಲ್ಲಿಟ್ಟು, ನಾಯಿ ಬಿಟ್ಟಿದ್ದರು. ಎರಡು ದಿನಗಳಿಂದ ಇದೇ ಸ್ಥಳಕ್ಕೆ ಚಿರತೆ ಬಂದಿದ್ದರೂ ಬೋನಿಗೆ ಹೊಕ್ಕಿರಲಿಲ್ಲ. ಭಾನುವಾರ ಬೋನಿಗೆ ಬಿದ್ದ ವಿಷಯವನ್ನು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ವಾಹನದಲ್ಲಿ ಹೊಸಪೇಟೆ ಬಳಿಯ ಗುಂಡಾ ಅರಣ್ಯದಲ್ಲಿರುವ ಗೆಸ್ಟ್‍ಹೌಸ್‍ಗೆ ಸಾಗಿಸಿದರು. ಬನ್ನೇರುಘಟ್ಟ ಅಥವಾ ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಸಾಗಿಸುವ ಸಾಧ್ಯತೆಯಿದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಂದ ನಿರ್ದೇಶನ ಬಂದ ಆನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಉಪವಲಯ ಅರಣ್ಯಾಧಿಕಾರಿ ಉಮೇಶ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT