ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೇಂದ್ರ ಕಚೇರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ನಿವೇಶನದ ನಿರೀಕ್ಷೆಯಲ್ಲಿದ್ದ ನಾಗರಿಕರಿಗೆ ಬಿಡಿಎ ನಿರಾಸೆ

ಬಹುನಿರೀಕ್ಷಿತ ಕೆಂಪೇಗೌಡ ಬಡಾವಣೆಯ 5 ಸಾವಿರ ನಿವೇಶನಗಳ ಹಂಚಿಕೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಹೊರಡಿಸಬೇಕಿದ್ದ ಅಧಿಸೂಚನೆಯನ್ನು ನ.1 ರ ರಾಜ್ಯೋತ್ಸವ ದಿನಕ್ಕೆ...

ಬೆಂಗಳೂರು: ಬಹುನಿರೀಕ್ಷಿತ ಕೆಂಪೇಗೌಡ ಬಡಾವಣೆಯ 5 ಸಾವಿರ ನಿವೇಶನಗಳ ಹಂಚಿಕೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಹೊರಡಿಸಬೇಕಿದ್ದ ಅಧಿಸೂಚನೆಯನ್ನು ನ.1 ರ ರಾಜ್ಯೋತ್ಸವ ದಿನಕ್ಕೆ ಮುಂದೂಡಲಾಗಿದೆ.

ಇದಕ್ಕೂ ಮುನ್ನ ಅ.19 ರಂದು ಅಧಿಸೂಚನೆ ಹೊರಡಿಸಲು ತಯಾರಿ ನಡೆದಿತ್ತು. ಆದರೆ ರಾಜ್ಯೋತ್ಸವದ ವಿಶೇಷ ದಿನದಂದು ನಗರದ ಜನತೆಗೆ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಅಧಿಸೂಚನೆ ದಿನಾಂಕವನ್ನು ಎರಡು ವಾರಗಳ ಮಟ್ಟಿಗೆ ಮುಂದೂಡಲಾಗಿದೆ. ಇದರಿಂದಾಗಿ ಅರ್ಜಿ ಸಲ್ಲಿಸಲು ತುದಿಗಾಲಲ್ಲಿದ್ದವರು ನಿರಾಸೆಗೊಳಗಾಗಿದ್ದಾರೆ. ಅರ್ಜಿ ಸಲ್ಲಿಸಲು ಮತ್ತಷ್ಟು ದಿನಗಳ ಕಾಲ ಕಾಯಬೇಕಿದೆ. ಸರಣಿ ರಜಾದಿನಗಳು ಇರುವುದರಿಂದ ಅಧಿಸೂಚನೆ ಹೊರಡಿಸಿದರೆ ಮುಂದಿನ ಪ್ರಕ್ರಿಯೆಗಳಿಗೆ ಅಡಚಣೆಯಾಗಬಹುದು ಎಂಬ ಚರ್ಚೆಯೂ ನಡೆದಿದೆ.

ಉಂಟು ಮೀಸಲಾತಿ ಫಲ : 20/30 ನಿವೇಶನದ ರು.5 ಲಕ್ಷ ದರ ದಿಂದ ಆರಂಭವಾಗಿ 50/80 ವಿಸ್ತೀರ್ಣದ ರು.96 ಲಕ್ಷದ ನಿವೇಶನದವರೆಗೆ ದರವಿದೆ. ಸದ್ಯಕ್ಕೆ 5 ಸಾವಿರ ನಿವೇಶನ
ಹಂಚಲಾಗುತ್ತಿದೆ. ನಿವೇಶನ ಹಂಚಿಕೆಯ ಜೊತೆಗೆ ವಿವಿಧ ವರ್ಗಗಗಳಿಗೆ ಮೀಸಲಿನ ಲಾಭವೂ ದೊರೆತಿದೆ. ಇದರಲ್ಲಿ ಹಿಂದುಳಿದ ವರ್ಗ ಕ್ಕೆ ಪ್ರತ್ಯೇಕವಾದ ಶೇ.10 ರಷ್ಟು ಮೀಸಲು ನಿಗದಿ ಮಾಡಲಾಗಿದೆ. ಹಿಂದುಳಿದ ವರ್ಗದ `2ಎ' ಹಾಗೂ ` 2ಬಿ' ವರ್ಗಕ್ಕೆ ಒಟ್ಟು ಶೇ.10 ಪ್ರತ್ಯೇಕ ಮೀಸಲು ನೀಡಲಾಗಿದೆ.

ಕಳೆದ ಬಾರಿ ನಿವೇಶನಕ್ಕೆ ಅರ್ಜಿ ಕರೆದಿದ್ದಾಗ ಹಿಂದುಳಿದ ವರ್ಗಕ್ಕೆ ಮೀಸಲು ನೀಡರಲಿಲ್ಲ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿ ದ ವರ್ಗಕ್ಕೆ ಮೀಸಲು ಕಲ್ಪಿಸಿದ್ದಾರೆ. ಪ.ಪಂಗಡಕ್ಕೆ ಶೇ.3, ಪ.ಜಾತಿಗೆ ಶೇ.15, ಪ್ರವರ್ಗ1ಕ್ಕೆ ಶೇ.2, ಮಾಜಿ ಸೈನಿಕರಿಗೆ ಶೇ.5, ರಾಜ್ಯ ಸರ್ಕಾರಿ ನೌಕರರಿಗೆ ಶೇ.10, ಕೇಂದ್ರ ಸರ್ಕಾರಿ ನೌಕರರಿಗೆ ಶೇ.2, ವಿಕಲಚೇತನರಿಗೆ ಶೇ.2, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಶೇ.2 ರಷ್ಟು ಮೀಸಲು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT