ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೇಂದ್ರ ಕಚೇರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ನಿವೇಶನದ ನಿರೀಕ್ಷೆಯಲ್ಲಿದ್ದ ನಾಗರಿಕರಿಗೆ ಬಿಡಿಎ ನಿರಾಸೆ

ಬಹುನಿರೀಕ್ಷಿತ ಕೆಂಪೇಗೌಡ ಬಡಾವಣೆಯ 5 ಸಾವಿರ ನಿವೇಶನಗಳ ಹಂಚಿಕೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಹೊರಡಿಸಬೇಕಿದ್ದ ಅಧಿಸೂಚನೆಯನ್ನು ನ.1 ರ ರಾಜ್ಯೋತ್ಸವ ದಿನಕ್ಕೆ...

ಬೆಂಗಳೂರು: ಬಹುನಿರೀಕ್ಷಿತ ಕೆಂಪೇಗೌಡ ಬಡಾವಣೆಯ 5 ಸಾವಿರ ನಿವೇಶನಗಳ ಹಂಚಿಕೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಹೊರಡಿಸಬೇಕಿದ್ದ ಅಧಿಸೂಚನೆಯನ್ನು ನ.1 ರ ರಾಜ್ಯೋತ್ಸವ ದಿನಕ್ಕೆ ಮುಂದೂಡಲಾಗಿದೆ.

ಇದಕ್ಕೂ ಮುನ್ನ ಅ.19 ರಂದು ಅಧಿಸೂಚನೆ ಹೊರಡಿಸಲು ತಯಾರಿ ನಡೆದಿತ್ತು. ಆದರೆ ರಾಜ್ಯೋತ್ಸವದ ವಿಶೇಷ ದಿನದಂದು ನಗರದ ಜನತೆಗೆ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಅಧಿಸೂಚನೆ ದಿನಾಂಕವನ್ನು ಎರಡು ವಾರಗಳ ಮಟ್ಟಿಗೆ ಮುಂದೂಡಲಾಗಿದೆ. ಇದರಿಂದಾಗಿ ಅರ್ಜಿ ಸಲ್ಲಿಸಲು ತುದಿಗಾಲಲ್ಲಿದ್ದವರು ನಿರಾಸೆಗೊಳಗಾಗಿದ್ದಾರೆ. ಅರ್ಜಿ ಸಲ್ಲಿಸಲು ಮತ್ತಷ್ಟು ದಿನಗಳ ಕಾಲ ಕಾಯಬೇಕಿದೆ. ಸರಣಿ ರಜಾದಿನಗಳು ಇರುವುದರಿಂದ ಅಧಿಸೂಚನೆ ಹೊರಡಿಸಿದರೆ ಮುಂದಿನ ಪ್ರಕ್ರಿಯೆಗಳಿಗೆ ಅಡಚಣೆಯಾಗಬಹುದು ಎಂಬ ಚರ್ಚೆಯೂ ನಡೆದಿದೆ.

ಉಂಟು ಮೀಸಲಾತಿ ಫಲ : 20/30 ನಿವೇಶನದ ರು.5 ಲಕ್ಷ ದರ ದಿಂದ ಆರಂಭವಾಗಿ 50/80 ವಿಸ್ತೀರ್ಣದ ರು.96 ಲಕ್ಷದ ನಿವೇಶನದವರೆಗೆ ದರವಿದೆ. ಸದ್ಯಕ್ಕೆ 5 ಸಾವಿರ ನಿವೇಶನ
ಹಂಚಲಾಗುತ್ತಿದೆ. ನಿವೇಶನ ಹಂಚಿಕೆಯ ಜೊತೆಗೆ ವಿವಿಧ ವರ್ಗಗಗಳಿಗೆ ಮೀಸಲಿನ ಲಾಭವೂ ದೊರೆತಿದೆ. ಇದರಲ್ಲಿ ಹಿಂದುಳಿದ ವರ್ಗ ಕ್ಕೆ ಪ್ರತ್ಯೇಕವಾದ ಶೇ.10 ರಷ್ಟು ಮೀಸಲು ನಿಗದಿ ಮಾಡಲಾಗಿದೆ. ಹಿಂದುಳಿದ ವರ್ಗದ `2ಎ' ಹಾಗೂ ` 2ಬಿ' ವರ್ಗಕ್ಕೆ ಒಟ್ಟು ಶೇ.10 ಪ್ರತ್ಯೇಕ ಮೀಸಲು ನೀಡಲಾಗಿದೆ.

ಕಳೆದ ಬಾರಿ ನಿವೇಶನಕ್ಕೆ ಅರ್ಜಿ ಕರೆದಿದ್ದಾಗ ಹಿಂದುಳಿದ ವರ್ಗಕ್ಕೆ ಮೀಸಲು ನೀಡರಲಿಲ್ಲ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿ ದ ವರ್ಗಕ್ಕೆ ಮೀಸಲು ಕಲ್ಪಿಸಿದ್ದಾರೆ. ಪ.ಪಂಗಡಕ್ಕೆ ಶೇ.3, ಪ.ಜಾತಿಗೆ ಶೇ.15, ಪ್ರವರ್ಗ1ಕ್ಕೆ ಶೇ.2, ಮಾಜಿ ಸೈನಿಕರಿಗೆ ಶೇ.5, ರಾಜ್ಯ ಸರ್ಕಾರಿ ನೌಕರರಿಗೆ ಶೇ.10, ಕೇಂದ್ರ ಸರ್ಕಾರಿ ನೌಕರರಿಗೆ ಶೇ.2, ವಿಕಲಚೇತನರಿಗೆ ಶೇ.2, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಶೇ.2 ರಷ್ಟು ಮೀಸಲು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT