ಪ್ರಕಾಶ್ ಜಾವ್ಡೇಕರ್ 
ಜಿಲ್ಲಾ ಸುದ್ದಿ

ಕಸ್ತೂರಿ ರಂಗನ್ ವರದಿ ಡಿಸೆಂಬರ್ ನಲ್ಲಿ ಸಭೆ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್

ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ವರ್ಷಾಂತ್ಯದಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು.

ಬೆಂಗಳೂರು:ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ವರ್ಷಾಂತ್ಯದಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದರು.
ಮರ ವಿಜ್ಞಾನ ಹಾಗೂ ತಂತ್ರಜ್ಞಾನ ಸಂಸ್ಥೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತು ಈಗಾಗಲೇ ಹಲವಾರು ರಾಜ್ಯಗಳು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಿವೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಡಿಸೆಂಬರ್ ಅಥವಾ ಜನವರಿಯಲ್ಲಿ ಎಲ್ಲಾ ರಾಜ್ಯಗಳ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕಸ್ತೂರಿ ರಂಗನ್ ವರದಿ ಕುರಿತು ತಮಿಳುನಾಡನ್ನು ಹೊರತುಪಡಿಸಿ ಕರ್ನಾಟಕ, ಕೇರಳ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ ರಾಜ್ಯಗಳು ತಮ್ಮ ಅಭಿಪ್ರಾಯ ನೀಡಿವೆ. ಯಾವುದೇ ರಾಜ್ಯಕ್ಕೂ ತೊಂದರೆಯಾಗದಂತೆ ಸರಿದೂಗಿಸುವಂತಹ ನಿರ್ಧಾರವನ್ನು ಕೇಂದ್ರ ಕೈಗೊಳ್ಳಲಿದೆ. ವರ್ಷಾರಂಭದಲ್ಲಿ ಅನುಷ್ಠಾನ ವರದಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಘನತ್ಯಾಜ್ಯ ವಿಲೇವಾರಿ ನೀತಿ: ಘನತ್ಯಾಜ್ಯ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮಕರ ಸಂಕ್ರಮಣದ ಸಂದರ್ಭದಲ್ಲಿ ಜಾರಿಗೊಳೀಸಲು ಉದ್ದೇಶಿಸಲಾಗಿದೆ. ಇದರಲ್ಲಿ ಔಷಧ ತ್ಯಾಜ್ಯ, ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಗಣೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!