ಪ್ರಶಾಂತ್ ಪೂಜಾರಿ 
ಜಿಲ್ಲಾ ಸುದ್ದಿ

ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ: ಮತ್ತೆ ನಾಲ್ವರ ಬಂಧನ

ಮೂಡುಬಿದಿರೆ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರು...

ಮಂಗಳೂರು: ಮೂಡುಬಿದಿರೆ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ. ಇದುವರೆಗೂ 8 ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ಪೂಜಾರಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಎಸ್.ಮುರಗನ್ ಅವರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮೊಹಮ್ಮದ್ ಶರೀಫ್, ಮುಸ್ತಾಫ್ ಕಾವೂರ್, ಮೊಹಮ್ಮದ್ ಮುಸ್ತಾಫ್ ಮತ್ತು ಕಬೀರ್ ಎಂಬ ಶಂಕಿತ ಆರೋಪಿಗಳನ್ನು ಇಂದು ಬಂಧಿಸಲಾಗಿದೆ.

ಇದಕ್ಕೂ ಮುನ್ನ ಮೊಹಮ್ಮದ್ ಹನೀಫ್, ಮೊಹಮ್ಮದ್ ಇಲ್ಯಾಸ್, ಇಬ್ರಾಹಿಂ ಲಿಯಾಖತ್ ಮತ್ತು ಅಬ್ದುಲ್ ರಶೀದ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.

ಗೋಕಳ್ಳರ ವಿರುದ್ಧದ ಕಾರ್ಯಾಚರಣೆ ಸಂದರ್ಭ ಮುಂಚೂಣಿಯಲ್ಲಿದ್ದ ಪ್ರಶಾಂತ್ ಪೂಜಾರಿ ಅವರನ್ನು ಅ.9ರಂದು ದುಷ್ಕರ್ಮಿಧಿಗಳ ಹತ್ಯೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel