ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಅನ್ನಭಾಗ್ಯದ ಅಕ್ಕಿ ಚೀಲಗಳಲ್ಲಿ ಅಕ್ಕಿ ಬದಲು ಕಲ್ಲು!

ರಾಜ್ಯ ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವ ವಿಷಯ ಗೊತ್ತೇ ಇದೆ. ಸರ್ಕಾರದ ಹೆಚ್ಚಿನ...

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವ ವಿಷಯ ಗೊತ್ತೇ ಇದೆ. ಸರ್ಕಾರದ ಹೆಚ್ಚಿನ ಯೋಜನೆಗಳಲ್ಲಿಯೂ ಅನೇಕ ಸಂದರ್ಭಗಳಲ್ಲಿ ಅಕ್ರಮ ನಡೆಯುತ್ತದೆ. ಇಲ್ಲಿಯೂ ಆಗಿದ್ದು ಅದುವೇ. ಕೆಲವರು ಹಣಕ್ಕೋಸ್ಕರ ಏನು ಬೇಕಾದರೂ ಮಾಡಲು ಸಿದ್ಧ ಎಂಬುದಕ್ಕೆ ಇದುವೇ ಉದಾಹರಣೆ.

 ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ . ಸಾರ್ವಜನಿಕರೇ ಅವ್ಯವಹಾರವನ್ನು ಬಯಲಿಗೆಳೆದಿದ್ದಾರೆ.ಬೆಂಗಳೂರಿನಿಂದ ಬಂದ ಮೂರು ಲಾರಿಗಳಲ್ಲಿ  ಅಕ್ಕಿ ಚೀಲಗಳಲ್ಲಿ ಸೈಜುಗಲ್ಲುಗಳನ್ನು ಹಾಕಿ ತೂಕ ಸರಿಬರುವಂತೆ ಮಾಡಲಾಗುತ್ತಿತ್ತು. ಹೀಗೆ ಮೂರು ಲಾರಿಗಳಲ್ಲಿ ಅಕ್ಕಿ ಚೀಲಗಳಲ್ಲಿ ಸುಮಾರು 1500 ಕೆಜಿ ಕಲ್ಲುಗಳು ಪತ್ತೆಯಾಗಿದೆ.
 
ಲಾರಿ ಚಾಲಕ ಮತ್ತು ಕ್ಲೀನರ್ ಸೇರಿಕೊಂಡು ಅನ್ನಭಾಗ್ಯದ ಅಕ್ಕಿ ಚೀಲದಲ್ಲಿ ಸೈಜುಗಲ್ಲುಗಳನ್ನು ತುಂಬಿಸುತ್ತಿದ್ದರು. ಹೀಗೆ ಒಂದು ದಿವಸ ಅಕ್ಕಿಚೀಲ ತೂಕ ಮಾಡುವಾಗ ಸಾರ್ವಜನಿಕರು ಗಮನಿಸಿದ್ದಾರೆ. ತಮ್ಮ ಅಕ್ರಮ ಬಯಲಿಗೆ ಬಂದಾಗ ಚಾಲಕರು, ಕ್ಲೀನರ್ ಗಳು ಲಾರಿಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಲಾರಿಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT