ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಗದಗದಲ್ಲಿ ವಾಮಾಚಾರಕ್ಕೆ ಇಬ್ಬರು ಮಕ್ಕಳ ಬಲಿ ಶಂಕೆ

25 ದಿನ ಹಿಂದೆ ಮನೆ ಎದುರು ಆಟವಾಡುತ್ತಿದ್ದಾಗ ಕಣ್ಮರೆಯಾಗಿದ್ದ ಇಬ್ಬರು ಬಾಲಕರ ಶವಗಳು ಮಂಗಳವಾರ ಪತ್ತೆಯಾಗಿದ್ದು, ಅವರನ್ನು ವಾಮಾಚಾರಕ್ಕೆ ಬಳಸಿರುವ ಅನುಮಾನ ವ್ಯಕ್ತವಾಗಿದೆ...

ನವಲಗುಂದ: ತಾಲೂಕಿನ ಶಿರಕೋಳ ಗ್ರಾಮದಲ್ಲಿ 25 ದಿನ ಹಿಂದೆ ಮನೆ ಎದುರು ಆಟವಾಡುತ್ತಿದ್ದಾಗ ಕಣ್ಮರೆಯಾಗಿದ್ದ ಇಬ್ಬರು ಬಾಲಕರ ಶವಗಳು ಮಂಗಳವಾರ ಪತ್ತೆಯಾಗಿದ್ದು, ಅವರನ್ನು ವಾಮಾಚಾರಕ್ಕೆ ಬಳಸಿರುವ ಅನುಮಾನ ವ್ಯಕ್ತವಾಗಿದೆ.

ಗ್ರಾಮದ ವೀರಪ್ಪ ಬಸಪ್ಪ ಶಿರಸಂಗಿ - ಸುಜಾತಾ ದಂಪತಿ ಮಕ್ಕಳಾದ ನಾಗರಾಜ (13) ಹಾಗೂ ಆಕಾಶ (9) ಸೆ. 25ರಂದು ಮನೆ ಎದುರು ಆಟವಾಡುತ್ತಿದ್ದಾಗಲೇ ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ನವಲಗುಂದ ಪೊಲೀಸರ ಮೊರೆಹೋಗಿದ್ದರು. ಎಲ್ಲೆಡೆ ವಿಚಾರಿಸಿದರೂ ಪತ್ತೆಯಾಗದ ಕಾರಣ ಪೊಲೀಸರೂ ಕೈಚೆಲ್ಲಿದ್ದರು.

ಮಂಗಳವಾರ ಗ್ರಾಮದ ಸಮೀಪದ ತುಪರಿ ಹಳ್ಳದ ಮುಳ್ಳಿನ ಕಂಟಿಗೆ ಸಿಲುಕಿದ ಸ್ಥಿತಿಯಲ್ಲಿ ಈ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಇಬ್ಬರನ್ನೂ ಭೀಕರವಾಗಿ ಕೊಲೆ ಮಾಡಲಾಗಿದೆ. ಒಬ್ಬ ಬಾಲಕನ ಕುತ್ತಿಗೆ ಹಾಗೂ ಕೈ, ಮತ್ತೊಬ್ಬನ ಕೈ ಕೊಯ್ದು ಶವಗಳನ್ನು ಹಳ್ಳದಲ್ಲಿ ಬಿಸಾಕಿದ್ದಾರೆ. ಕಾಲಿನ ಭಾಗವೂ ದೇಹದಿಂದ ಬೇರ್ಪಟ್ಟಿತ್ತು. ಇದನ್ನು ಗಮನಿಸಿದಾಗ, ಮಕ್ಕಳನ್ನು ವಾಮಾಚಾರಕ್ಕೆ ಬಳಸಿರುವ ಶಂಕೆ
ವ್ಯಕ್ತವಾಗಿದ್ದು, ನವಲಗುಂದ ಠಾಣೆ ಪಿಎಸ್‍ಐ ಆನಂದ ಡೋಣಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT