ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಗದಗದಲ್ಲಿ ವಾಮಾಚಾರಕ್ಕೆ ಇಬ್ಬರು ಮಕ್ಕಳ ಬಲಿ ಶಂಕೆ

25 ದಿನ ಹಿಂದೆ ಮನೆ ಎದುರು ಆಟವಾಡುತ್ತಿದ್ದಾಗ ಕಣ್ಮರೆಯಾಗಿದ್ದ ಇಬ್ಬರು ಬಾಲಕರ ಶವಗಳು ಮಂಗಳವಾರ ಪತ್ತೆಯಾಗಿದ್ದು, ಅವರನ್ನು ವಾಮಾಚಾರಕ್ಕೆ ಬಳಸಿರುವ ಅನುಮಾನ ವ್ಯಕ್ತವಾಗಿದೆ...

ನವಲಗುಂದ: ತಾಲೂಕಿನ ಶಿರಕೋಳ ಗ್ರಾಮದಲ್ಲಿ 25 ದಿನ ಹಿಂದೆ ಮನೆ ಎದುರು ಆಟವಾಡುತ್ತಿದ್ದಾಗ ಕಣ್ಮರೆಯಾಗಿದ್ದ ಇಬ್ಬರು ಬಾಲಕರ ಶವಗಳು ಮಂಗಳವಾರ ಪತ್ತೆಯಾಗಿದ್ದು, ಅವರನ್ನು ವಾಮಾಚಾರಕ್ಕೆ ಬಳಸಿರುವ ಅನುಮಾನ ವ್ಯಕ್ತವಾಗಿದೆ.

ಗ್ರಾಮದ ವೀರಪ್ಪ ಬಸಪ್ಪ ಶಿರಸಂಗಿ - ಸುಜಾತಾ ದಂಪತಿ ಮಕ್ಕಳಾದ ನಾಗರಾಜ (13) ಹಾಗೂ ಆಕಾಶ (9) ಸೆ. 25ರಂದು ಮನೆ ಎದುರು ಆಟವಾಡುತ್ತಿದ್ದಾಗಲೇ ನಾಪತ್ತೆಯಾಗಿದ್ದರು. ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ನವಲಗುಂದ ಪೊಲೀಸರ ಮೊರೆಹೋಗಿದ್ದರು. ಎಲ್ಲೆಡೆ ವಿಚಾರಿಸಿದರೂ ಪತ್ತೆಯಾಗದ ಕಾರಣ ಪೊಲೀಸರೂ ಕೈಚೆಲ್ಲಿದ್ದರು.

ಮಂಗಳವಾರ ಗ್ರಾಮದ ಸಮೀಪದ ತುಪರಿ ಹಳ್ಳದ ಮುಳ್ಳಿನ ಕಂಟಿಗೆ ಸಿಲುಕಿದ ಸ್ಥಿತಿಯಲ್ಲಿ ಈ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಇಬ್ಬರನ್ನೂ ಭೀಕರವಾಗಿ ಕೊಲೆ ಮಾಡಲಾಗಿದೆ. ಒಬ್ಬ ಬಾಲಕನ ಕುತ್ತಿಗೆ ಹಾಗೂ ಕೈ, ಮತ್ತೊಬ್ಬನ ಕೈ ಕೊಯ್ದು ಶವಗಳನ್ನು ಹಳ್ಳದಲ್ಲಿ ಬಿಸಾಕಿದ್ದಾರೆ. ಕಾಲಿನ ಭಾಗವೂ ದೇಹದಿಂದ ಬೇರ್ಪಟ್ಟಿತ್ತು. ಇದನ್ನು ಗಮನಿಸಿದಾಗ, ಮಕ್ಕಳನ್ನು ವಾಮಾಚಾರಕ್ಕೆ ಬಳಸಿರುವ ಶಂಕೆ
ವ್ಯಕ್ತವಾಗಿದ್ದು, ನವಲಗುಂದ ಠಾಣೆ ಪಿಎಸ್‍ಐ ಆನಂದ ಡೋಣಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT