(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಕೊಲೆಯಲ್ಲಿ ಅಂತ್ಯವಾದ ಜಗಳ

ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬರ್ಮಾ ದೇಶದ ಪ್ರಜೆಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊತ್ತನೂರು ಸಮೀಪದ ಬೆಳ್ಳಳ್ಳಿಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ...

ಬೆಂಗಳೂರು: ನಗರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬರ್ಮಾ ದೇಶದ ಪ್ರಜೆಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊತ್ತನೂರು ಸಮೀಪದ ಬೆಳ್ಳಳ್ಳಿಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ.

ಚಿಂದಿ ಆಯುತ್ತಿದ್ದ ಅಬ್ದುಲ್ ಖಾದರ್ (18) ಕೊಲೆಯಾದವ, ಆರೋಪಿಗಳಾದ ಅರುಣ್, ಜೈನಾಬ್, ರಿಜ್ವಾನ್ ತಲೆಮರೆಸಿಕೊಂಡಿದ್ದಾರೆ. ಖಾದರ್ ಮತ್ತು ಅರೋಪಿಗಳು ಕೆಲಸ ಅರಸಿ ಒಂದೂವರೆ ತಿಂಗಳ ಹಿಂದೆ ನಗರಕ್ಕೆ ಬಂದಿದ್ದರು.

ಬೆಳ್ಳಳ್ಳಿಯಲ್ಲಿರುವ ಇಸೂಬ್ ಖಾನ್ ಎಂಬುವರ ಜಮೀನು ನೋಡಿಕೊಂಡು ಅಲ್ಲೇ ವಾಸವಾಗಿದ್ದರು. ಗುರುವಾರ ರಾತ್ರಿ 10 ಗಂಟೆಯಲ್ಲಿ ಅರುಣ್ ಮತ್ತು ಖಾದರ್ ನಡುವೆ ಹಣದ ವಿಷಯಕ್ಕೆ ಜಗಳ ಆರಂಭವಾಗಿದೆ. ಆಗ ಅರುಣ್ ಖಾದರ್ ಮೇಲೆ ಹಲ್ಲೆ ನಡೆಸಿದ್ದಾನೆ. ದೊಣ್ಣೆಯಿಂದ ಹೊಡೆದ್ದರಿಂದ ನಿತ್ರಾಣನಾಗಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಸಾವಿಗೀಡಾಗಿದ್ದಾರೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ; 1 ಲಕ್ಷ ರೂ. ದಂಡ; 10 ವರ್ಷ ಶಿಕ್ಷೆ!

ಸಮಾಧಿಯಲ್ಲೂ ನೆಮ್ಮದಿ ಇಲ್ಲ: Devil ರಿಲೀಸ್‌ಗೂ ಮುನ್ನ ದಿನ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸಗೊಳಿಸಿದ ಕಿಡಿಗೇಡಿಗಳು!

ಗೋವಿಂದಾ... ಗೋವಿಂದ..: TTDಗೆ 10 ವರ್ಷ ಕೋಟ್ಯಾಂತರ ರೂ. ಪಂಗನಾಮ; "ರೇಷ್ಮೆ" ಹಗರಣದಿಂದ ಭಾರಿ ನಷ್ಟ, ಅವಮಾನ!

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: 'ನಾನು ಕೇವಲ ಪಾರ್ಟನರ್' ಎಂದ ಬಂಧಿತ ಅಜಯ್ ಗುಪ್ತಾ

ಮೈಸೂರು: ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು!

SCROLL FOR NEXT