(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಎಟಿಎಂ ಹಣ ಕದ್ದವನ ಕೃತ್ಯ ಸೆರೆ

ಎಟಿಎಂ ಘಟಕಕ್ಕೆ ತುಂಬಲು ತೆಗೆದುಕೊಂಡು ಹೋಗಿದ್ದ ಹಣದಲ್ಲಿ ರು.50 ಲಕ್ಷ ದೋಚಿ ಪರಾರಿಯಾಗಿರುವ ಆರೋಪಿ ಮಹೇಶ್ (21) ಕೃತ್ಯ ಬ್ಯಾಂಕ್‍ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ...

ಬೆಂಗಳೂರು: ಎಟಿಎಂ ಘಟಕಕ್ಕೆ ತುಂಬಲು ತೆಗೆದುಕೊಂಡು ಹೋಗಿದ್ದ ಹಣದಲ್ಲಿ ರು.50 ಲಕ್ಷ ದೋಚಿ ಪರಾರಿಯಾಗಿರುವ ಆರೋಪಿ ಮಹೇಶ್ (21) ಕೃತ್ಯ ಬ್ಯಾಂಕ್‍ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋ ವಶಕ್ಕೆ ಪಡೆದಿರುವ ಪೊಲೀಸರು ಅದನ್ನು ಫೋಟೋ ರೂಪದಲ್ಲಿ ಸಿದಟಛಿಪಡಿಸಿ ವಿವಿಧ ಠಾಣೆಗಳಿಗೆ ರವಾನಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲೂ ಅಂಟಿಸಿದ್ದಾರೆ. ಕೃತ್ಯ ಎಸಗುವ ಮೂರು ದಿನಗಳ ಹಿಂದಷ್ಟೇ ಬ್ರಿಂಕ್ಸ್ ಆರ್ಯ ಕಂಪನಿಗೆ ತನ್ನ ಸ್ವವಿವರಗಳ ಸುಳ್ಳು ದಾಖಲೆ ಮಾತ್ರವಲ್ಲದೇ ಸುಳ್ಳು ಮೊಬೈಲ್ ಫೋನ್ ಸಂಖ್ಯೆಯನ್ನು ನೀಡಿದ್ದ. ಹೀಗಾಗಿ, ಆರೋಪಿ ಬಂಧನ ಸವಾಲಾಗಿದೆ.

ಅಂತಿಮವಾಗಿ ಆತನ ಫೋಟೋಗಳನ್ನು ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಮುದ್ರಿಸುವುದರಿಂದ ಆರೋಪಿ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬಹುದು ಎನ್ನುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬುಧವಾರ (ಅ. 21) ಬೆಳಗ್ಗೆ 11.30ಕ್ಕೆ ಮಹಾತ್ಮ ಗಾಂಧಿ ರಸ್ತೆಯ ಟ್ರಿನಿಟಿ ವೃತ್ತದಲ್ಲಿರುವ ಇಂಡಸ್ ಇಂಡ್ ಬ್ಯಾಂಕ್ ಬಳಿ ಇರುವ ಎಟಿಎಂಗೆ ಬ್ರಿಂಕ್ಸ್ ಆರ್ಯ ಕಂಪನಿಯ ಮೇಲ್ವಿಚಾರಕ ಮಂಜುನಾಥ್, ಮಹೇಶ್, ಕಾರು ಚಾಲಕ ಪ್ರಭು ಮತ್ತು ಸೆಕ್ಯುರಿಟಿ ಗಾರ್ಡ್ ಮುತ್ತಣ್ಣ ಟಾಟಾ ಸುಮೋದಲ್ಲಿ ರು.1 ಕೋಟಿ ತಂದಿದ್ದರು. ಈ ವೇಳೆ ಮೂವರನ್ನು ಯಾಮಾರಿಸಿದ್ದ ಆರೋಪಿ ಮಹೇಶ್ ರು.50 ಲಕ್ಷ ದೋಚಿ ಪರಾರಿಯಾಗಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ನೋ ಹ್ಯಾಂಡ್ ಶೇಕ್; ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ, ಭಾರತದಲ್ಲಿ 2 ಬದಲಾವಣೆ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

T20 World Cup 2026: ಹ್ಯಾಂಡ್ ಶೇಕ್ ವಿವಾದ, ಟೀಂ ಇಂಡಿಯಾ ವಿರುದ್ದ ಸಂಜಯ್ ಮಂಜ್ರೇಕರ್ ಕಿಡಿ! ನೆಟ್ಟಿಗರ ತರಾಟೆ

T20 World Cup 2026: ಪಾಕ್ ವಿರುದ್ಧದ ಪಂದ್ಯದಲ್ಲಿ 'ಹ್ಯಾಂಡ್ ಶೇಕ್' ಮಾಡದಿರಲು ಟೀಂ ಇಂಡಿಯಾ ನಿರ್ಧಾರ!

T20 World Cup 2026: ಭಾರತ ವಿರುದ್ಧದ ಪಂದ್ಯ, ಪಾಕಿಸ್ತಾನಕ್ಕೆ 'ಮಾನಸಿಕ ಗೆಲುವು' ಎಂದ ಮಾಜಿ ನಾಯಕ! ಏನಿದು ವಿಚಿತ್ರ ಹೇಳಿಕೆ?

SCROLL FOR NEXT