(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಎಟಿಎಂ ಹಣ ಕದ್ದವನ ಕೃತ್ಯ ಸೆರೆ

ಎಟಿಎಂ ಘಟಕಕ್ಕೆ ತುಂಬಲು ತೆಗೆದುಕೊಂಡು ಹೋಗಿದ್ದ ಹಣದಲ್ಲಿ ರು.50 ಲಕ್ಷ ದೋಚಿ ಪರಾರಿಯಾಗಿರುವ ಆರೋಪಿ ಮಹೇಶ್ (21) ಕೃತ್ಯ ಬ್ಯಾಂಕ್‍ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ...

ಬೆಂಗಳೂರು: ಎಟಿಎಂ ಘಟಕಕ್ಕೆ ತುಂಬಲು ತೆಗೆದುಕೊಂಡು ಹೋಗಿದ್ದ ಹಣದಲ್ಲಿ ರು.50 ಲಕ್ಷ ದೋಚಿ ಪರಾರಿಯಾಗಿರುವ ಆರೋಪಿ ಮಹೇಶ್ (21) ಕೃತ್ಯ ಬ್ಯಾಂಕ್‍ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋ ವಶಕ್ಕೆ ಪಡೆದಿರುವ ಪೊಲೀಸರು ಅದನ್ನು ಫೋಟೋ ರೂಪದಲ್ಲಿ ಸಿದಟಛಿಪಡಿಸಿ ವಿವಿಧ ಠಾಣೆಗಳಿಗೆ ರವಾನಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲೂ ಅಂಟಿಸಿದ್ದಾರೆ. ಕೃತ್ಯ ಎಸಗುವ ಮೂರು ದಿನಗಳ ಹಿಂದಷ್ಟೇ ಬ್ರಿಂಕ್ಸ್ ಆರ್ಯ ಕಂಪನಿಗೆ ತನ್ನ ಸ್ವವಿವರಗಳ ಸುಳ್ಳು ದಾಖಲೆ ಮಾತ್ರವಲ್ಲದೇ ಸುಳ್ಳು ಮೊಬೈಲ್ ಫೋನ್ ಸಂಖ್ಯೆಯನ್ನು ನೀಡಿದ್ದ. ಹೀಗಾಗಿ, ಆರೋಪಿ ಬಂಧನ ಸವಾಲಾಗಿದೆ.

ಅಂತಿಮವಾಗಿ ಆತನ ಫೋಟೋಗಳನ್ನು ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಮುದ್ರಿಸುವುದರಿಂದ ಆರೋಪಿ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬಹುದು ಎನ್ನುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬುಧವಾರ (ಅ. 21) ಬೆಳಗ್ಗೆ 11.30ಕ್ಕೆ ಮಹಾತ್ಮ ಗಾಂಧಿ ರಸ್ತೆಯ ಟ್ರಿನಿಟಿ ವೃತ್ತದಲ್ಲಿರುವ ಇಂಡಸ್ ಇಂಡ್ ಬ್ಯಾಂಕ್ ಬಳಿ ಇರುವ ಎಟಿಎಂಗೆ ಬ್ರಿಂಕ್ಸ್ ಆರ್ಯ ಕಂಪನಿಯ ಮೇಲ್ವಿಚಾರಕ ಮಂಜುನಾಥ್, ಮಹೇಶ್, ಕಾರು ಚಾಲಕ ಪ್ರಭು ಮತ್ತು ಸೆಕ್ಯುರಿಟಿ ಗಾರ್ಡ್ ಮುತ್ತಣ್ಣ ಟಾಟಾ ಸುಮೋದಲ್ಲಿ ರು.1 ಕೋಟಿ ತಂದಿದ್ದರು. ಈ ವೇಳೆ ಮೂವರನ್ನು ಯಾಮಾರಿಸಿದ್ದ ಆರೋಪಿ ಮಹೇಶ್ ರು.50 ಲಕ್ಷ ದೋಚಿ ಪರಾರಿಯಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT