ನ್ಯಾಯಮೂರ್ತಿ ಸಂತೋಷ್ ಹೆಗಡೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಾಧಕರಿಗೆ ದಸರಾ ಸನ್ಮಾನ

ನಗರದ ಎಚ್‍ಎಸ್‍ಆರ್ ಲೇಔಟ್‍ನ `ಜೈ ಮಾತಾ ದೀ' ಸಂಘದ ವತಿಯಿಂದ 8ನೇ ವರ್ಷದ ದಸರಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು...

ಬೆಂಗಳೂರು: ನಗರದ ಎಚ್‍ಎಸ್‍ಆರ್ ಲೇಔಟ್‍ನ `ಜೈ ಮಾತಾ ದೀ' ಸಂಘದ ವತಿಯಿಂದ 8ನೇ ವರ್ಷದ ದಸರಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶನಿವಾರ ನಡೆದ ಕಾರ್ಯಕ್ರಮದಲ್ಲಿ
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಇದೇ ವೇಳೆ ಯಕ್ಷಗಾನ, ಸಂಗೀತ ಸೇರಿದಂತೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ತುಮಕೂರಿನ ಅಟವಿ ಮಠದ ಶಿವಲಿಂಗ ಮಹಾ ಸ್ವಾಮೀಜಿ ಅವರಿಗೆ `ಶಾಂತಿ ಮತ್ತು ಸಹಬಾಳ್ವೇ ಪ್ರಶಸ್ತಿ, ಗೋಸಾಯಿ ಮಠದ ಸ್ವಾಮಿ ಬುದ್ಧಿ ಯೋಗಾನಂದ ಸ್ವಾಮೀಜಿ ಗೆ `ಜೀವಮಾನ ಸಾಧನೆ ಪ್ರಶಸ್ತಿ', ಎಚ್. ಆರ್.ಸೋಮಶೇಖರ ರೆಡ್ಡಿ ಹಾಗೂ ಎಚ್. ಆರ್.ಶಾಮಲಾ ಅವರಿಗೆ `ಎಚ್‍ಎಸ್‍ಆರ್ ಲೇಔಟ್‍ನ ಆದರ್ಶ ದಂಪತಿ 2015-ದಸರಾ ಪ್ರಶಸ್ತಿ', ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರಿಗೆ `ಭೈರವ ರತ್ನ ಪ್ರಶಸ್ತಿ', ಸಮಾಜ ಸೇವಕ ಡಾ.ನಾಗೇಂದ್ರ ಪ್ರಸಾದ್ ಅವರಿಗೆ `ದಸರ ಶ್ರೀ ಪ್ರಶಸ್ತಿ' ಹಾಗೂ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯ ಪೇದೆ ರಘು ಬೆಟ್ಟಳ್ಳಿ ಅವರಿಗೆ `ಉದಯೋನ್ಮುಖ ಪ್ರತಿಭೆ ಪ್ರಶಸ್ತಿ', ಪಂಚಮಿ ಎಂಬ ಯುವತಿಗೆ `ದಸರಾ ಸುಂದರಶ್ರೀ ಪ್ರಶಸ್ತಿ'ಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೆ ಗಣ್ಯರನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಕಾರ್ಯಕ್ರಮ ದಲ್ಲಿ ಎಚ್‍ಎಸ್‍ಆರ್ ಲೇಔಟ್‍ನ ನೂರಾರು ನಾಗರಿಕರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT