ಗೀತಾ ಶಿವರಾಜ್ ಕುಮಾರ್ ಮತ್ತು ಮಧು ಬಂಗಾರಪ್ಪ 
ಜಿಲ್ಲಾ ಸುದ್ದಿ

ಸ್ವಚ್ಚತೆ ಮೂಲಕ ಮಾಜಿ ಸಿಎಂ ಬಂಗಾರಪ್ಪ ಅವರ ಜನ್ಮದಿನ ಆಚರಣೆಗೆ ಸಿದ್ದತೆ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 83ನೇ ಹುಟ್ಟುಹಬ್ಬದ ಅಂಗವಾಗಿ ಈ ತಿಂಗಳ 28ರಂದು ನಗರದಲ್ಲಿ ನಮನ, ಚಿಂತನ ಮತ್ತು ಅಭಿನಂದನ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 83ನೇ ಹುಟ್ಟುಹಬ್ಬದ ಅಂಗವಾಗಿ ಈ ತಿಂಗಳ  28ರಂದು ನಗರದಲ್ಲಿ ನಮನ, ಚಿಂತನ ಮತ್ತು ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಎಸ್‌.ಬಂಗಾರಪ್ಪ ವಿಚಾರ ವೇದಿಕೆ ಮತ್ತು ಎಸ್‌.ಬಂಗಾರಪ್ಪ ಫೌಂಡೇಶನ್‌ ವತಿಯಿಂದ ಈ ಕಾರ್ಯಕ್ರಮ ಅರಮನೆ ಮೈದಾನದ ವೈಟ್‌ ಪೆಟಲ್ಸ್‌ನಲ್ಲಿ ನಡೆಯಲಿದೆ’ ಎಂದು ವೇದಿಕೆಯ ವ್ಯವಸ್ಥಾಪಕ ಟ್ರಸ್ಟಿ, ಶಾಸಕ ಮಧು ಬಂಗಾರಪ್ಪ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರೈತ ಮತ್ತು ಪ್ರಸ್ತುತ ಕೃಷಿ ಸಂದರ್ಭ ಮತ್ತು ಕಪ್ಪು ಕನ್ನಡಕದ ಹಿಂದಿನ ಕರ್ನಾಟಕದ ಕನಸು ಕುರಿತು ಎರಡು  ವಿಚಾರ ಗೋಷ್ಠಿಗಳು ನಡೆಯಲಿವೆ. ಸಂಜೆ 4.30ಕ್ಕೆ ಜಾನಪದ ಝೇಂಕಾರ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ವೇದಿಕೆಯ ಗೌರವ ವ್ಯವಸ್ಥಾಪಕ ಟ್ರಸ್ಟಿ ಗೀತಾ ಶಿವರಾಜ್‌ಕುಮಾರ್ ಮಾತನಾಡಿ, ‘ಬಂಗಾರಪ್ಪ ಅವರ ಚಿಂತನೆಗಳನ್ನು ಮುಂದುವರೆಸಿಕೊಂಡು ಹೋಗುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಕೆರೆ ಹೂಳೆತ್ತುವ ಕಾರ್ಯಕ್ರಮ:
ಸೊರಬ ತಾಲ್ಲೂಕಿನ ಮಾವಲಿಯ ದೊಡ್ಡಕೆರೆಯ ಹೂಳೆತ್ತಲಾಗುವುದು. ಈ ಕಾರ್ಯಕ್ರಮದಲ್ಲಿ ನಾನು ಶ್ರಮದಾನ ಮಾಡುವೆ’ ಎಂದು ಮಧು ಬಂಗಾರಪ್ಪ ಹೇಳಿದರು. ‘1,400 ಕೆರೆಗಳಿರುವ ಸೊರಬದಲ್ಲಿ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಹೀಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 1500ಕ್ಕೂ ಹೆಚ್ಚು ಮಂದಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ಬಂಗಾರ ಪ್ರಶಸ್ತಿ

ಅ. 28 ಸಂಜೆ 5.45ಕ್ಕೆ ನಡೆಯಲಿರುವ  ಅಭಿನಂದನಾ ಕಾರ್ಯಕ್ರಮದಲ್ಲಿ ಬೀದರ್‌ನ ಭಾಲ್ಕಿಯ ಬಸವಲಿಂಗ ಪಟ್ಟ ದೇವರು ಅವರಿಗೆ ಸೇವಾ ಬಂಗಾರ, ಪ್ಯಾರಾಲಿಂಪಿಕ್ ಕ್ರೀಡಾಪಟು ಎಚ್.ಎನ್‌. ಗಿರೀಶ್‌ ಅವರಿಗೆ ಕ್ರೀಡಾ ಬಂಗಾರ, ಹಿರಿಯ ರಂಗನಟಿ ಸುಭದ್ರಮ್ಮ ಮನ್ಸೂರ್‌ ಅವರಿಗೆ ಕಲಾ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು ಮತ್ತು ಫಲಕ ಒಳಗೊಂಡಿದೆ ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT