ಕಸಾಪ ಅಧ್ಯಕ್ಷ ಪುಂಡಲೀಕ ಹಾಲಂಬಿ 
ಜಿಲ್ಲಾ ಸುದ್ದಿ

ಕನ್ನಡ ಕಡತಕ್ಕೆ ಕಂಟಕ: ಹಾಲಂಬಿ

ಕನ್ನಡ ಕೆಲಸಗಳಿಗೆ ಸಂಬಂಧಿಸಿದ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅಸಮಾಧಾನ ಹೊರ ಹಾಕಿದ್ದಾರೆ...

ಬೆಂಗಳೂರು: ಕನ್ನಡ ಕೆಲಸಗಳಿಗೆ ಸಂಬಂಧಿಸಿದ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅಸಮಾಧಾನ ಹೊರ ಹಾಕಿದ್ದಾರೆ.

ವೀರಲಕ್ಷ್ಮಿ ಕ್ರಿಯೇಷನ್ಸ್ ಕಸಾಪದ ಶ್ರೀಕೃಷ್ಣರಾಜ ಪರಿಷನ್ಮಂದಿರ ದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲಹರಿ ಆಡಿಯೋ ಹೊರತಂದಿರುವ `ಸೆರೆಯೊಳಗಿನ ಬಣ್ಣಗಳು' ಧ್ವನಿಸಾಂದ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಹಾಗೂ ಸಚಿವರು ನಮ್ಮ ಮನವಿಗೆ ಸ್ಪಂದಿಸುತ್ತಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಕಸಾಪ ಕಳುಹಿಸಿದ ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಕಾಳಜಿ ವಹಿಸುತ್ತಿಲ್ಲ.

ಕಡತಗಳನ್ನು ನೋಡಿ ಬೀಸಾಕುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶೀಘ್ರ ಶತಮಾನ ಭವನ: ಪರಿಷತ್ತಿಗೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ನೆನಪಿನ ಭವನ ನಿರ್ಮಿಸಲು ರಾಜ್ಯ ಸರ್ಕಾರ ಮೂರುವರೆ ಕೋಟಿ ಹಾಗೂ ಬಿಬಿಎಂಪಿ ಒಂದೂವರೆ ಕೋಟಿ ನೀಡಿದೆ. ಭವನ ನಿರ್ಮಾಣಕ್ಕೆ ಅಧಿಕಾರಿಗಳಿಂದ ತಾಂತ್ರಿಕ ತೊಂದರೆ ಎದುರಾಗಿತ್ತು. ಈಗ ಅವೆಲ್ಲವನ್ನು ಬಗೆಹರಿಸಿದ್ದು ಮುಂದಿನ ಒಂದು ವಾರದೊಳಗೆ ಕರ್ನಾಟಕ ಗೃಹ ಮಂಡಳಿಯವರು ಭವನ ನಿರ್ಮಾಣ ಕಾಮಗಾರಿ ಆರಂಬಿsಸಲಿದ್ದಾರೆ ಎಂದರು.

ಕಸಾಪ ಶತಮಾನೋತ್ಸವದ ಹಿನ್ನೆಲೆಯಲ್ಲಿ ನಾಲ್ವಡಿ ಕೃಷ್ಣರಾಜರ ಊರಾದ ಮೈಸೂರಿನಲ್ಲಿ ಅ. 30 ಮತ್ತು 31ರಂದು ಸಂಭ್ರಮಾಚರಣೆ ಏರ್ಪಡಿಸಲಾಗಿದೆ. ಕನ್ನಡ ಪರಿಚಾರಕರು ಎಲ್ಲರೂ ಭಾಗವಹಿಸಬೇಕು. ಈ ಸಂಭ್ರಮಾಚರಣೆ ಪ್ರಯುಕ್ತ ಕುವೆಂಪು ಅವರ ಶ್ರೀರಾಮಾಯಣ ದರ್ಶನಂ ಕೃತಿಯನ್ನು ಪ್ರಕಟಿಸಿದ್ದು, ಈಗಾಗಲೇ 700 ಕೃತಿಗಳು ಮಾರಾಟವಾಗಿವೆ. ಡಾ.ಎಸ್.ಎಲ್. ಭೈರಪ್ಪ ಅವರ ಗೃಹಭಂಗ ಕೃತಿಯನ್ನು ಮರುಮುದ್ರಣ ಮಾಡಬೇಕೆಂಬ ಆಸೆ ಇನ್ನೂ ಕೈಗೂಡಿಲ್ಲ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿ ಆರ್. ಸೋಮಶೇಖರ್, ಕರ್ನಾಟಕ ಸುಗಮ ಸಂಗೀತ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆನಂದ ಮಾದಲಗೆರೆ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT