ಅಭಯ ಚಂದ್ರ ಜೈನ್ 
ಜಿಲ್ಲಾ ಸುದ್ದಿ

ಸಚಿವ ಅಭಯ ಚಂದ್ರ ಜೈನ್ ಗೆ ರವಿ ಪೂಜಾರಿಯಿಂದ ಕೊಲೆ ಬೆದರಿಕೆ

ಸಚಿವ ಕೆ.ಅಭಯಚಂದ್ರ ಜೈನ್ ಅವರಿಗೆ ಶನಿವಾರ ಮಧ್ಯಾಹ್ನ ರವಿ ಪೂಜಾರಿ ಎಂಬ ಹೆಸರಿನಲ್ಲಿ ಜೀವಬೆದರಿಕೆ ಕರೆ ಬಂದಿದೆ....

ಮೂಡುಬಿದಿರೆ: ರಾಜ್ಯ ಕ್ರೀಡಾ ಯುವಜನ ಸೇವಾ ಹಾಗೂ ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಅವರಿಗೆ ಶನಿವಾರ ಮಧ್ಯಾಹ್ನ ರವಿ ಪೂಜಾರಿ ಎಂಬ ಹೆಸರಿನಲ್ಲಿ  ಜೀವಬೆದರಿಕೆ ಕರೆ ಬಂದಿದೆ.

ಶನಿವಾರ ಮಧ್ಯಾಹ್ನ 12.39ರ ವೇಳೆಗೆ +5065 ಇಂಟರ್‍ನೆಟ್ ಕಾಲ್ ನಂಬರ್ ಮುಖಾಂತರ ಅಭಯಚಂದ್ರ ಜೈನ್‍ಗೆ ಕರೆ ಮಾಡಿದ ವ್ಯಕ್ತಿ `ತಾನು ರವಿ ಪೂಜಾರಿ ಮಾತನಾಡುವುದು. ನೀನು ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದೀಯ. ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಜೀವ ಬೆದರಿಕೆಯೊಡಿದ್ದಾನೆ.

ನಾನು ಕೊಲೆ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಅಭಯಚಂದ್ರ ಜೈನ್ ಹೇಳಿದಾಗ, `ಇಲ್ಲ ನೀನು ಹಾಗೂ ರಮಾನಾಥ ರೈ ಇಬ್ಬರೂ ಭಾಗಿಯಾಗಿದ್ದೀರಿ ಎಂದು ಮರು ಉತ್ತರಿಸಿದ್ದಾನೆ. ಕರೆ ಮಾಡಿದ ವ್ಯಕ್ತಿಯು ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಜೈನ್ ಜೊತೆ ಸಂಭಾಷಣೆ ಮಾಡಿದ್ದಾನೆ. ಸಚಿವರು ಪೊಲೀಸರಿಗೆ ಸಂಜೆ ದೂರು ನೀಡಿದ್ದಾರೆ.

ಭದ್ರತೆ:
ಅಭಯಚಂದ್ರ ಜೈನ್ ಬೆದರಿಕೆ ಕುರಿತು ಸಿಎಂ ಹಾಗೂ ಗೃಹ ಸಚಿವರ ಗಮನಕ್ಕೆ ತಂದಿದ್ದು, ದ.ಕ ಜಿಲ್ಲಾ ಪೊಲೀಸ್ ಕಮೀಷನರ್ ಮುರುಗನ್ ಸಂಜೆ ವೇಳೆ ಸಚಿವರ ಮನೆಗೆ ಆಗಮಿಸಿ ಮಾಹಿತಿ ಪಡೆದಿದ್ದಾರೆ. ಬೆದರಿಕೆ ಹಿನ್ನಲೆಯಲ್ಲಿ ಸಚಿವರ ಮನೆಗೆ ಭದ್ರತೆಯನ್ನು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT