ಆರೂರು ಲಕ್ಷ್ಮಣ್ ಶೇಟ್ 
ಜಿಲ್ಲಾ ಸುದ್ದಿ

ಸಾಹಿತಿ ಆರೂರು ಲಕ್ಷ್ಮಣ ಶೇಟ್‌ ನಿಧನ

ಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್‌ (66) ಶನಿವಾರ ನಿಧನರಾಗಿದ್ದಾರೆ. .....

ಹುಬ್ಬಳ್ಳಿ : ಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್‌ (66) ಶನಿವಾರ ನಿಧನರಾಗಿದ್ದಾರೆ.

ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಸಾಹಿತ್ಯ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವಿದೆ. ಮೂಲತಃ ಉಡುಪಿ ಜಿಲ್ಲೆಯ ಆರೂರು ಮೂಲದ ಲಕ್ಷ್ಮಣ ಶೇಟ್‌ ಕಳೆದ ಮೂರು ದಶಕಗಳಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದರು.

ಕತೆಗಾರ, ಕಾದಂಬರಿಕಾರ, ಕವಿಯಾಗಿ ಹಲವಾರು ಸಾಹಿತ್ಯ ಕೃತಿಗಳನ್ನು ರಚಿಸಿದ್ದ ಅವರು ಹಲವಾರು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆದಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಕತೆಗಳನ್ನು ಬರೆಯುತ್ತಿದ್ದ ಅವರು, ಸುಮಾರು 400 ಕತೆಗಳನ್ನು ಬರೆದಿದ್ದಾರೆ. ಅವರ ಎರಡು ಕಥಾ ಸಂಕಲನಗಳಲ್ಲಿ "ವೇಷಗಳು' ಪ್ರಮುಖವಾದುದು.

ಬಿಎಯಲ್ಲಿ ರ್‍ಯಾಂಕ್‌ ಪಡೆದ ಲಕ್ಷ್ಮಣ ಶೇಟ್‌, ಅದೇ ದಿನ ಶಿಕ್ಷಕರಾಗಿದ್ದ ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ಸಾಹಿತ್ಯಿಕ ವಲಯದಲ್ಲಿ ಸದಾ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT