ಆರೂರು ಲಕ್ಷ್ಮಣ್ ಶೇಟ್ 
ಜಿಲ್ಲಾ ಸುದ್ದಿ

ಸಾಹಿತಿ ಆರೂರು ಲಕ್ಷ್ಮಣ ಶೇಟ್‌ ನಿಧನ

ಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್‌ (66) ಶನಿವಾರ ನಿಧನರಾಗಿದ್ದಾರೆ. .....

ಹುಬ್ಬಳ್ಳಿ : ಹಿರಿಯ ಸಾಹಿತಿ, ಅಂಕಣಕಾರ, ಅಕ್ಷರ ಸಾಹಿತ್ಯ ವೇದಿಕೆ ಅಧ್ಯಕ್ಷ ಆರೂರು ಲಕ್ಷ್ಮಣ ಶೇಟ್‌ (66) ಶನಿವಾರ ನಿಧನರಾಗಿದ್ದಾರೆ.

ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಸಾಹಿತ್ಯ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವಿದೆ. ಮೂಲತಃ ಉಡುಪಿ ಜಿಲ್ಲೆಯ ಆರೂರು ಮೂಲದ ಲಕ್ಷ್ಮಣ ಶೇಟ್‌ ಕಳೆದ ಮೂರು ದಶಕಗಳಿಂದ ಹುಬ್ಬಳ್ಳಿಯಲ್ಲಿ ನೆಲೆಸಿದ್ದರು.

ಕತೆಗಾರ, ಕಾದಂಬರಿಕಾರ, ಕವಿಯಾಗಿ ಹಲವಾರು ಸಾಹಿತ್ಯ ಕೃತಿಗಳನ್ನು ರಚಿಸಿದ್ದ ಅವರು ಹಲವಾರು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆದಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಕತೆಗಳನ್ನು ಬರೆಯುತ್ತಿದ್ದ ಅವರು, ಸುಮಾರು 400 ಕತೆಗಳನ್ನು ಬರೆದಿದ್ದಾರೆ. ಅವರ ಎರಡು ಕಥಾ ಸಂಕಲನಗಳಲ್ಲಿ "ವೇಷಗಳು' ಪ್ರಮುಖವಾದುದು.

ಬಿಎಯಲ್ಲಿ ರ್‍ಯಾಂಕ್‌ ಪಡೆದ ಲಕ್ಷ್ಮಣ ಶೇಟ್‌, ಅದೇ ದಿನ ಶಿಕ್ಷಕರಾಗಿದ್ದ ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ಸಾಹಿತ್ಯಿಕ ವಲಯದಲ್ಲಿ ಸದಾ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT