ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ನಕಲಿ ವೈದ್ಯಕೀಯ ಬಿಲ್ ನಾಲ್ವರು ಪೊಲೀಸ್ ಬಲೆಗೆ

ನಕಲಿ ವೈದ್ಯಕೀಯ ದಾಖಲೆ ಸೃಷ್ಟಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ಯತ್ನಿಸಿ ನಾಲ್ವರನ್ನು ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ....

ಬೆಂಗಳೂರು: ನಕಲಿ ವೈದ್ಯಕೀಯ ದಾಖಲೆ ಸೃಷ್ಟಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ಯತ್ನಿಸಿ ನಾಲ್ವರನ್ನು ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ. ದೇಶಲಿಂಗ, ಇಲಿಯಾಸ್, ರಾಜುಗೌಡ ಮತ್ತು ಲಿಂಗೇಗೌಡ ಬಂಧಿತರು. ಆರೋಪಿಗಳೆಲ್ಲರೂ ಮಂಡ್ಯ, ಚನ್ನಪಟ್ಟಣ ಮೂಲದವರು. ದೇಶಲಿಂಗನನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು ಆತ ನೀಡಿದ ಮಾಹಿತಿ ಆಧಾರಿಸಿ ಉಳಿದ ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ದೇಶಲಿಂಗ, ಮೂವರು ಆರೋಪಿಗಳಿಗೆ ಆಸ್ಪತ್ರೆಯ ನಕಲಿ ಬಿಲ್ ಹಾಗೂ ವೈದ್ಯಕೀಯ ಪ್ರಮಾಣಪತ್ರ ಒದಗಿಸುತ್ತಿದ್ದ. ಮೂವರು ಆರೋಪಿಗಳು ದಾಖಲೆಗಳೊಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ ವೈದ್ಯಕೀಯ ಆರ್ಥಿಕ ನೆರವು ಕೋರಿ ಒಂದೇ ವಾರದಲ್ಲಿ 14 ಮಂದಿ-ಯಿಂದ ಅರ್ಜಿಗಳು ಬಂದಿವೆ. ಪರಿಶೀಲನೆ ವೇಳೆ ವೈದ್ಯಕೀಯ ಪ್ರಮಾಣ -ಪತ್ರಗಳು, ಹಾಗೂ ಗುರುತಿನ ಚೀಟಿ ನಕಲಿ ನೀಡಿರುವುದು ಕಂಡು ಬಂದಿದೆ ಎಂದು ಅ.16ರಂದು ಮುಖ್ಯಮಂತ್ರಿ ಕಚೇರಿ ಪರಿಹಾರ ನಿಧಿ ವಿಭಾಗದ ಉಪ ಕಾರ್ಯದರ್ಶಿ ಸೋಮಶೇಖರ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ತನಿಖೆ ಕೈಗೊಂಡ ಪೊಲೀಸರ ತಂಡ ಅರ್ಜಿದಾರರು ನೀಡಿದ್ದ ವಿಳಾಸ ಹುಡುಕಿಕೊಂಡು ಮಂಡ್ಯ ಹಾಗೂ ಚನ್ನಪಟ್ಟಣದ ಕುಟುಂಬ ಸದಸ್ಯರನ್ನು ಸಂಪರ್ಕಿಸಿದಾಗ ತಮ್ಮ ಮನೆಯಲ್ಲಿ ಯಾರೂ ಅನಾರೋಗ್ಯಕ್ಕೀಡಾಗಿಲ್ಲ. ಅಲ್ಲದೇ, ಪರಿಹಾರ ಕೋರಿ ಅರ್ಜಿಯನ್ನು ಸಲ್ಲಿಸಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT