ಮಣಪ್ಪುರಂ ಲೋಗೋ 
ಜಿಲ್ಲಾ ಸುದ್ದಿ

ಮಣಪ್ಪುರಂ ದರೋಡೆ ಪ್ರಕರಣ: ಜ್ಞಾನ ಭಾರತಿ ಪೊಲೀಸರಿಂದ ಐವರ ಸೆರೆ

ಜ್ಞಾನಭಾರತಿ ಸಮೀಪದ ಮರಿಯಪ್ಪನಪಾಳ್ಯದ ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ ಅ. 16 ರಂದು ಹಗಲು ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಐವರು....

ಬೆಂಗಳೂರು: ಜ್ಞಾನಭಾರತಿ ಸಮೀಪದ ಮರಿಯಪ್ಪನಪಾಳ್ಯದ ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ ಅ. 16 ರಂದು ಹಗಲು ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಸುರೇಶ್, ಧನಶೇಖರ್, ರಾಮು, ಸುರೇಶ್ ಹಾಗೂ ವಿನೋದ್ ಬಂಧಿತರು. ಆರೋಪಿಗಳಿಂದ ಸುಮಾರು ರೂ.2 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮರಿಯಪ್ಪನ ಪಾಳ್ಯದಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ಶುಕ್ರವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಕಿ ಕ್ಯಾಪ್ ಧರಿಸಿ ಒಳಗೆ ನುಗ್ಗಿದ್ದ ಆರೋಪಿಗಳು ರೂ.1.5 ಲಕ್ಷ ನಗದು ಹಾಗೂ ರೂ. ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.

ಮೊಬೈಲ್ ನೀಡಿದ್ದ ಸುಳಿವು?: ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು  ಜ್ಞಾನ ಭಾರತಿ ಹಾಗೂ  ಮರಿಯಪ್ಪನ ಪಾಳ್ಯ ಸರಹದ್ದಿನ ಮೊಬೈಲ್ ಟವರ್‍ಗಳಿಂದ ಸಂಪರ್ಕ ಪಡೆದ ಮೊಬೈಲ್ ಸಂಖ್ಯೆಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆಗ ಕೃತ್ಯ ನಡೆದ ವೇಳೆ ಮಳಿಗೆಯಲ್ಲೇ ಆರೋಪಿ ಸುರೇಶ್‍ನ ಮೊಬೈಲ್ ಫೋನ್ ಟವರ್ ಲೊಕೇಶನ್ ಸಿಕ್ಕಿತ್ತು. ಆ ಮೊಬೈಲ್ ಫೋನ್  ಸಂಖ್ಯೆ ವಿಳಾಸ ಆಧಾರಿಸಿ ಸುರೇಶ್ ನನ್ನು ವಶಕ್ಕೆ ಪಡೆದಿದ್ದರು. ಬಳಿಕ ಉಳಿದ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರ ಮಾಹಿತಿ ಆಧರಿಸಿ ದೋಚಿದ್ದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ದರೋಡೆಗೆ ತಮಿಳು ಸಿನಿಮಾವೊಂದು ಪ್ರೇರಣೆ ನೀಡಿತ್ತು ಎಂದು ವಿಚಾರಣೆ ವೇಳೆ ಆರೋಪಿಗಳು ಹೇಳಿದ್ದಾರೆಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT