ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮೊಬೈಲ್ ಕಳ್ಳನನ್ನು ಬೆನ್ನತ್ತಿ ಹಿಡಿದ ಹೊಯ್ಸಳ

ನಡೆದು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ದುಷ್ಕರ್ಮಿಯನ್ನು ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ಬೆನ್ನಟ್ಟಿ ಬಂಧಿಸಿರುವ ಘಟನೆ...

ಬೆಂಗಳೂರು: ನಡೆದು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ದುಷ್ಕರ್ಮಿಯನ್ನು ಗಸ್ತಿನಲ್ಲಿದ್ದ ಹೊಯ್ಸಳ ಪೊಲೀಸರು ಬೆನ್ನಟ್ಟಿ ಬಂಧಿಸಿರುವ ಘಟನೆ ಉಪ್ಪಾರಪೇಟೆ ಕಿಲಾರಿ ರಸ್ತೆಯಲ್ಲಿ ನಡೆದಿದೆ. ವಿವಿ ಪುರ ನಿವಾಸಿ ಮಹಮ್ಮದ್ ಕದೀರ್ (26) ಬಂಧಿತ ಆರೋಪಿ.

ಯಶವಂತಪುರದ ಜನರಲ್ ಸ್ಟೋರ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಲಾಷ್ ಎಂಬುವವರು ಕೆಲಸ ಮುಗಿಸಿಕೊಂಡು ತಡರಾತ್ರಿ 10.30ರಲ್ಲಿ ಅಭಿನಯ ಚಿತ್ರಮಂದಿರನಡೆದು ಹೋಗುತ್ತಿದ್ದರು. ಅಲ್ಲಿಂದ ಕಿಲಾರಿ ರಸ್ತೆ ಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬಂದ ಕದೀರ್ ಅವರನ್ನು ಬೆದರಿಸಿ ಮೊಬೈಲ್ ಕಿತ್ತು-ಕೊಂಡು ಪರಾರಿಯಾದ. ಈ ವೇಳೆ ಸಹಾಯಕ್ಕಾಗಿ ಅಭಿಲಾಷ್ ಕೂಗಾಡಿದ್ದಾರೆ. ಇದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಪರಾರಿ ಯಾಗುತ್ತಿದ್ದ ಆರೋಪಿಯನ್ನು ಬೆನ್ನತ್ತಿ ಹಿಡಿದಿದ್ದಾರೆ. ಆರೋಪಿಯಿಂದ ಮೊಬೈಲ್ ಪೋನ್ ಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಉಪ್ಪಾರಪೇಟೆ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT