ಪದವಿ ಪೂರ್ವ ಶಿಕ್ಷಣ ಇಲಾಖೆ 
ಜಿಲ್ಲಾ ಸುದ್ದಿ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

2016ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕರಡು ವೇಳಾಪಟ್ಟಿಯನ್ನು ಪ್ರಕಟಿಸಿದೆ....

ಬೆಂಗಳೂರು: 2016ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕರಡು ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೇಳಾಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ನವೆಂಬರ್ 20ರೊಳಗೆ ಸಲ್ಲಿಸಬಹುದಾಗಿದೆ.

ಮಾರ್ಚ್‌ 10 ರಿಂದ ಮಾರ್ಚ್ 26 ತನಕ ಪರೀಕ್ಷೆಗಳು ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಡಿ.ಎಸ್‌. ರಮೇಶ್‌ ಅವರು ಪ್ರಕಟಣೆ ಹೊರಡಿಸಿದ್ದಾರೆ. ಕರಡು ವೇಳಾಪಟ್ಟಿಯ ಪ್ರಕಾರ 2016ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 10ರಿಂದ 26ರವರೆಗೆ ನಡೆಯಲಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 9 ರಿಂದ 12.15ರ ತನಕ ನಡೆಯಲಿವೆ.

ಆದರೆ, ಮಾರ್ಚ್‌ 17ರಂದು ನಡೆಯುವ ಪರೀಕ್ಷೆಗಳ ಪೈಕಿ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನ 2ರಿಂದ 5.15ರವರೆಗೆ ನಡೆಯಲಿದೆ ಎಂದು ಕರಡು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.

ಒಂದು ವೇಳೆ ಆಕ್ಷಪಣೆಗಳಿದ್ದರೇ, ಆಕ್ಷೇಪಣೆಗಳನ್ನು ಸಲ್ಲಿಸಬೇಕಾದ ವಿಳಾಸ : ಜಂಟಿ ನಿರ್ದೇಶಕರು (ಪರೀಕ್ಷೆ), ಪದವಿ ಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560012.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

* ಮಾರ್ಚ್ 10 : ಇತಿಹಾಸ, ಗಣಕ ವಿಜ್ಞಾನ
 * ಮಾರ್ಚ್ 11 : ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್
 * ಮಾರ್ಚ್ 12 : ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್
* ಮಾರ್ಚ್ 14 : ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ
* ಮಾರ್ಚ್ 15 : ಭೂಗೋಳ ವಿಜ್ಞಾನ, ಗಣಿತ
 * ಮಾರ್ಚ್ 16 : ಸಮಾಜ ವಿಜ್ಞಾನ, ಲೆಕ್ಕಶಾಸ್ತ್ರ
 * ಮಾರ್ಚ್ 17 : ಮನಶಾಸ್ತ್ರ, ಭೌತವಿಜ್ಞಾನ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
 * ಮಾರ್ಚ್ 18 : ಐಚ್ಛಿಕ ಕನ್ನಡ
 * ಮಾರ್ಚ್ 19 : ತರ್ಕಶಾಸ್ತ್ರ, ಶಿಕ್ಷಣ
* ಮಾರ್ಚ್ 21 : ಇಂಗ್ಲಿಶ್
* ಮಾರ್ಚ್ 22 : ಮರಾಠಿ, ಉರ್ದು, ಸಂಸ್ಕೃತ
* ಮಾರ್ಚ್ 23 : ವ್ಯವಹಾರ ಅಧ್ಯಯನ, ರಸಾಯನ ವಿಜ್ಞಾನ
 * ಮಾರ್ಚ್ 24 : ಹಿಂದಿ, ತೆಲುಗು
* ಮಾರ್ಚ್ 26 : ಕನ್ನಡ, ತಮಿಳು, ಮಲಯಾಳಂ, ಅರೇಬಿಕ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!