ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಸರಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ ಬಂಧನ

ಸರಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ ನ ಏಳು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು...

ಬೆಂಗಳೂರು: ಸರಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ ನ ಏಳು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 21 ಲಕ್ಷ 60 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಮಧ್ಯಪ್ರದೇಶದ ಹೋಷಂಗಾ ಬಾದ್ ನ ಇರಾನಿ ಕಾಸಿಂ ಅಲಿ(35), ಸೈಯದ್ ಸಾದಿಕ್(32), ಸೈಯ್ಯದ್ ಸಿದ್ದಿಕ್(31), ಹರಿಹರದ ಟಿಪ್ಪುನಗರದ ಲಾಲ್ ಖಾನ್ (32), ಅಂಬೇವಾಲಿಯ ಶಬೀರ್ ಆಸೀಫ್ ಸೈಯ್ಯದ್ (28) ಆಂಧ್ರಪ್ರದೇಶದ ಅಬ್ಬು ಆಲಿ(29) ಗುಂತಕಲ್ ನ ಅಸಾದುಲ್ಲಾ ಆಲಿ(25) ಬಂಧಿತ ಆರೋಪಿಗಳು. 
ನಗರದ ವಿವಿದೆಡೆ ಬೈಕ್ ಗಳಲ್ಲಿ ಸಂಚರಿಸುತ್ತಿದ್ದ ಈ ಗ್ಯಾಂಗ್, ಒಂಟಿಯಾಗಿ ಓಡಾಡುವ ಮಹಿಳೆಯರ ಗಮನ ಬೇರೆಡೆ ಸೆಳೆದು, ಅವರ ಸರ ಕಸಿದು ಪರಾರಿಯಾಗುತ್ತಿದ್ದರು.
ಪೊಲೀಸರ ಸೋಗಿನಲ್ಲಿ ಬರುತಿದ್ದ ಈ ಗ್ಯಾಂಗ್, ಮಹಿಳೆಯರಿಗೆ ನೀವು ನಿಮ್ಮ ಆಭರಣ ತೆಗೆದು ಬ್ಯಾಗಿನಲ್ಲಿ ಹಾಕಿಕೊಂಡು ಹೋಗಿ, ಇಲ್ಲದಿದ್ದರೇ ದಂಡ ವಿಧಿಸುತ್ತೇವೆ ಎಂದು ಹೇಳುತ್ತಿದ್ದರು. ಈ ವೇಳೆ ಮಹಿಳೆಯರು ಬ್ಯಾಕಿನಲ್ಲಿ ಆಭರಣವನ್ನು ಹಾಕುವಾಗ ಕಸಿದು ಪರಾರಿಯಾಗುತ್ತಿದ್ದರು. ಈ ಗ್ಯಾಂಗ್ ನ್ನು ಬಂಧಿಸುವ ಮೂಲಕ ಸರ ಅಪಹರಣದ 21 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT