ವಿಷ್ಣುವರ್ಧನ್ ಸ್ಮಾರಕ- ಹೈಕೋರ್ಟ್ 
ಜಿಲ್ಲಾ ಸುದ್ದಿ

ಡಾ.ವಿಷ್ಣುವರ್ಧನ್ ಟ್ರಸ್ಟ್‌ಗೆ 2 ಎಕರೆ ಭೂಮಿ ಹಸ್ತಾಂತರಕ್ಕೆ ಹೈಕೋರ್ಟ್ ತಡೆ

ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಡಾ.ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು...

ಬೆಂಗಳೂರು: ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಡಾ.ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು ಎಕರೆ ಜಮೀನು ಹಸ್ತಾಂತರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ.
ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು ಎಕರೆ ಭೂಮಿಯನ್ನಾ ಹಸ್ತಾಂತರ ಮಾಡಲಾಗಿತ್ತು. ಈ ಸಂಬಂಧ ಸೆಪ್ಟೆಂಬರ್ 18, 22ರಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಿರಿಯ ನಟ ಬಾಲಕೃಷ್ಣರ ಪುತ್ರರಾದಂತಹ ಗಣೇಶ್ ಹಾಗೂ ಶ್ರೀನಿವಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಷ್ಣು ಪ್ರತಿಷ್ಠಾನಕ್ಕೆ ಭೂಮಿ ನೀಡಲು ನಮ್ಮ ಆಕ್ಷೇಪವಿಲ್ಲ. ಆದರೆ ರಾಜ್ಯ ಸರ್ಕಾರ ಭೂಮಿಗೆ ಪರಿಹಾರ ನೀಡಿಲ್ಲ. ಕೇವಲ ಬಿಳಿ ಹಾಳೆ ಮೇಲೆ ನಮ್ಮಿಂದ ಒಪ್ಪಿಗೆ ರುಜು ಪಡೆದಿದ್ದಾರೆ. ಕಾನೂನಿನ ಪ್ರಕ್ರಿಯೆ ಪಾಲಿಸದೇ ಅನ್ಯಾಯ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. 
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಣೇಶ್ ಮತ್ತು ಶ್ರೀನಿವಾಸ್ ಅವರ ವಾದವನ್ನು ಪರಿಗಣಿಸಿ ಜಮೀನು ಹಸ್ತಾಂತರಕ್ಕೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Women's World Cup 2025: ಜೆಮಿಮಾ ಭರ್ಜರಿ ಶತಕ, 5 ವಿಕೆಟ್ ಗಳಿಂದ ಆಸೀಸ್ ಸೋಲಿಸಿ, ಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಮೋದಿ ಮತಕ್ಕಾಗಿ 'ಭರತ ನಾಟ್ಯ'ನೂ ಮಾಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!

ಸಂಪುಟ ಸಭೆಯಲ್ಲಿ ಸಚಿವರ ಜಟಾಪಟಿ: ಡಾ. ಹೆಚ್‌.ಸಿ. ಮಹಾದೇವಪ್ಪ- ಕೆಜೆ ಜಾರ್ಜ್ ಕಿತ್ತಾಡಿಕೊಂಡ್ರಾ?

ಚುನಾವಣಾ ಆಯೋಗದ SIR ಗೆ ಹೆದರಿ ಆತ್ಮಹತ್ಯೆಗೆ ಶರಣಾದ ಪಶ್ಚಿಮ ಬಂಗಾಳದ ವ್ಯಕ್ತಿ!

ಪ. ಜಾತಿಯಲ್ಲಿ ಒಳ ಮೀಸಲಾತಿ: ಸಮರ್ಪಕ ಅನುಷ್ಟಾನಕ್ಕೆ ಮುಂದಿನ ಕ್ಯಾಬಿನೆಟ್ ನಲ್ಲಿ ಬಿಲ್ ಮಂಡನೆ!

SCROLL FOR NEXT