ವಿಷ್ಣುವರ್ಧನ್ ಸ್ಮಾರಕ- ಹೈಕೋರ್ಟ್ 
ಜಿಲ್ಲಾ ಸುದ್ದಿ

ಡಾ.ವಿಷ್ಣುವರ್ಧನ್ ಟ್ರಸ್ಟ್‌ಗೆ 2 ಎಕರೆ ಭೂಮಿ ಹಸ್ತಾಂತರಕ್ಕೆ ಹೈಕೋರ್ಟ್ ತಡೆ

ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಡಾ.ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು...

ಬೆಂಗಳೂರು: ನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಡಾ.ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು ಎಕರೆ ಜಮೀನು ಹಸ್ತಾಂತರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ.
ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು ಎಕರೆ ಭೂಮಿಯನ್ನಾ ಹಸ್ತಾಂತರ ಮಾಡಲಾಗಿತ್ತು. ಈ ಸಂಬಂಧ ಸೆಪ್ಟೆಂಬರ್ 18, 22ರಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. 
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹಿರಿಯ ನಟ ಬಾಲಕೃಷ್ಣರ ಪುತ್ರರಾದಂತಹ ಗಣೇಶ್ ಹಾಗೂ ಶ್ರೀನಿವಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಷ್ಣು ಪ್ರತಿಷ್ಠಾನಕ್ಕೆ ಭೂಮಿ ನೀಡಲು ನಮ್ಮ ಆಕ್ಷೇಪವಿಲ್ಲ. ಆದರೆ ರಾಜ್ಯ ಸರ್ಕಾರ ಭೂಮಿಗೆ ಪರಿಹಾರ ನೀಡಿಲ್ಲ. ಕೇವಲ ಬಿಳಿ ಹಾಳೆ ಮೇಲೆ ನಮ್ಮಿಂದ ಒಪ್ಪಿಗೆ ರುಜು ಪಡೆದಿದ್ದಾರೆ. ಕಾನೂನಿನ ಪ್ರಕ್ರಿಯೆ ಪಾಲಿಸದೇ ಅನ್ಯಾಯ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು. 
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಣೇಶ್ ಮತ್ತು ಶ್ರೀನಿವಾಸ್ ಅವರ ವಾದವನ್ನು ಪರಿಗಣಿಸಿ ಜಮೀನು ಹಸ್ತಾಂತರಕ್ಕೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Vice President Election 2025: ನೂತನ ಉಪ ರಾಷ್ಟ್ರಪತಿಯಾಗಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಮದ್ದೂರಿನಲ್ಲಿ ಕಲ್ಲು ತೂರಾಟ: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ; ಜಾತಿ, ಧರ್ಮ, ಪಕ್ಷ ಲೆಕ್ಕಿಸದೆ ಕ್ರಮ; Video

ಆಜ್ ತಕ್ ನಿರೂಪಕನ ವಿರುದ್ಧ ದ್ವೇಷ ಭಾಷಣ ಆರೋಪ: ಎಫ್‌ಐಆರ್ ದಾಖಲಿಸಲು UP ನ್ಯಾಯಾಲಯ ಆದೇಶ

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ? ಮಹಾ ಸಿಎಂ 'ಫಡ್ನವೀಸ್ ಪತ್ನಿ' ವಿರುದ್ಧ ನೆಟ್ಟಿಗರ ಆಕ್ರೋಶ, Video ವೈರಲ್

ಅಕ್ರಮ ಬೆಟ್ಟಿಂಗ್ ಪ್ರಕರಣ: ವೀರೇಂದ್ರ ಪಪ್ಪಿ ಚಿನ್ನದ ಖಜಾನೆ ಕಂಡು ED ಶಾಕ್; 21 ಕೆಜಿ ಗೋಲ್ಡ್ ಬಿಸ್ಕೇಟ್ ಜಪ್ತಿ

SCROLL FOR NEXT