ಶಂಕಿತ ಹಂತಕ ಮತ್ತು ಡಾ. ಎಂಎಂ ಕಲಬುರ್ಗಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಂಶೋಧಕ ಎಂಎಂ ಕಲಬುರ್ಗಿ ಹಂತಕನ ಹತ್ಯೆ?

ಹಿರಿಯ ಸಂಶೋಧಕ ಮತ್ತು ವಿಚಾರವಾದಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತ ವ್ಯಕ್ತಿಯ ರೇಖಾ ಚಿತ್ರವನ್ನು ಹೋಲುವ ವ್ಯಕ್ತಿಯ ಶವ ಪತ್ತೆಯಾಗಿದೆ.

ಬೆಳಗಾವಿ: ಹಿರಿಯ ಸಂಶೋಧಕ ಮತ್ತು ವಿಚಾರವಾದಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತ ವ್ಯಕ್ತಿಯ ರೇಖಾ ಚಿತ್ರವನ್ನು ಹೋಲುವ ವ್ಯಕ್ತಿಯ ಶವ ಪತ್ತೆಯಾಗಿದೆ.

ಬೆಳಗಾವಿಯ ಖಾನಾಪುರದಲ್ಲಿರುವ ಮಾನಸವಾಡಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಶಂಕಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿ ಯಾರೆಂದು ಈ ವರೆಗೂ  ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಪ್ರಸ್ತುತ ದೊರೆತಿರುವ ಶವವನ್ನು  ಕಳೆದ 10 ದಿನಗಳ ಹಿಂದೆಯೇ ತಂದು ಬಿಸಾಡಿ ಹೋಗಿರಬಹುದು ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ ಪಿ ರವಿಕಾಂತೇ ಗೌಡ ಅವರು, ಬೆಳಗಾವಿಯ ಖಾನಾಪುರ ಬಳಿಯ ಅರಣ್ಯ ಪ್ರದೇಶದಲ್ಲಿ ಅಪರಿಚತ ವ್ಯಕ್ತಿಯ ಶವ ಪತ್ತೆಯಾಗಿದೆ.  ಈ ಶವ ಸಂಶೋಧಕ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಬಿಡುಗಡೆಯಾಗಿದ್ದ ರೇಖಾಚಿತ್ರವನ್ನು ಹೋಲುತ್ತಿದೆ. ಆದರೆ ಮೃತ ವ್ಯಕ್ತಿ ಶಂಕಿತ ಹಂತಕನೆಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ಶವದ ಚಹರೆಯನ್ನು ಮತ್ತು ರೇಖಾಚಿತ್ರವನ್ನು ತಾಳೆ ಮಾಡಲು ತಜ್ಞರಿಗೆ ಸೂಚನೆ ನೀಡಲಾಗಿದೆ. ತನಿಖೆ ಮುಂದುವರೆದಿದ್ದು, ತನಿಖೆಯ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದು  ಹೇಳಿದ್ದಾರೆ.

ಹಿರಿಯ ಸಾಹಿತಿ ಮತ್ತು ಸಂಶೋಧಕ ಡಾ. ಎಂಎಂ ಕಲಬುರ್ಗಿ ಅವರನ್ನು ಕಳೆದ ಆಗಸ್ಟ್ 30ರಂದು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ತಮ್ಮ ವಿಚಾರವಾದಗಳಿಂದಲೇ  ಹಿಂದೂಪರ ಸಂಘಟನೆಗಳಿಂದ ಬೆದರಿಕೆ ಎದುರಿಸುತ್ತಿದ್ದ ಕಲಬುರ್ಗಿ ಅವರನ್ನು ಅವರ ಮನೆಯಲ್ಲಿಯೇ ಗುಂಡುಹಾರಿಸಿ ಕೊಲ್ಲಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಒಡಿ ಅಧಿಕಾರಿಗಳು  ನಡೆಸುತ್ತಿದ್ದು, ಇತ್ತೀಚೆಗಷ್ಟೇ ಶಂಕಿತ ಹಂತಕನ ರೇಖಾ ಚಿತ್ರ ಬಿಡುಗಡೆಯಾಗಿತ್ತು. ಇದೀಗ ಬೆಳಗಾವಿಯಲ್ಲಿ ಶಂಕಿತ ಹಂತಕನ ರೇಖಾಚಿತ್ರ ಹೋಲುವ ವ್ಯಕ್ತಿ ಶವ ದೊರೆತಿರುವುದು ಹಲವು  ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT