ಶಂಕಿತ ಹಂತಕ ಮತ್ತು ಡಾ. ಎಂಎಂ ಕಲಬುರ್ಗಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸಂಶೋಧಕ ಎಂಎಂ ಕಲಬುರ್ಗಿ ಹಂತಕನ ಹತ್ಯೆ?

ಹಿರಿಯ ಸಂಶೋಧಕ ಮತ್ತು ವಿಚಾರವಾದಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತ ವ್ಯಕ್ತಿಯ ರೇಖಾ ಚಿತ್ರವನ್ನು ಹೋಲುವ ವ್ಯಕ್ತಿಯ ಶವ ಪತ್ತೆಯಾಗಿದೆ.

ಬೆಳಗಾವಿ: ಹಿರಿಯ ಸಂಶೋಧಕ ಮತ್ತು ವಿಚಾರವಾದಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತ ವ್ಯಕ್ತಿಯ ರೇಖಾ ಚಿತ್ರವನ್ನು ಹೋಲುವ ವ್ಯಕ್ತಿಯ ಶವ ಪತ್ತೆಯಾಗಿದೆ.

ಬೆಳಗಾವಿಯ ಖಾನಾಪುರದಲ್ಲಿರುವ ಮಾನಸವಾಡಿ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಶಂಕಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿ ಯಾರೆಂದು ಈ ವರೆಗೂ  ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಪ್ರಸ್ತುತ ದೊರೆತಿರುವ ಶವವನ್ನು  ಕಳೆದ 10 ದಿನಗಳ ಹಿಂದೆಯೇ ತಂದು ಬಿಸಾಡಿ ಹೋಗಿರಬಹುದು ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ ಪಿ ರವಿಕಾಂತೇ ಗೌಡ ಅವರು, ಬೆಳಗಾವಿಯ ಖಾನಾಪುರ ಬಳಿಯ ಅರಣ್ಯ ಪ್ರದೇಶದಲ್ಲಿ ಅಪರಿಚತ ವ್ಯಕ್ತಿಯ ಶವ ಪತ್ತೆಯಾಗಿದೆ.  ಈ ಶವ ಸಂಶೋಧಕ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಬಿಡುಗಡೆಯಾಗಿದ್ದ ರೇಖಾಚಿತ್ರವನ್ನು ಹೋಲುತ್ತಿದೆ. ಆದರೆ ಮೃತ ವ್ಯಕ್ತಿ ಶಂಕಿತ ಹಂತಕನೆಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ಶವದ ಚಹರೆಯನ್ನು ಮತ್ತು ರೇಖಾಚಿತ್ರವನ್ನು ತಾಳೆ ಮಾಡಲು ತಜ್ಞರಿಗೆ ಸೂಚನೆ ನೀಡಲಾಗಿದೆ. ತನಿಖೆ ಮುಂದುವರೆದಿದ್ದು, ತನಿಖೆಯ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದು  ಹೇಳಿದ್ದಾರೆ.

ಹಿರಿಯ ಸಾಹಿತಿ ಮತ್ತು ಸಂಶೋಧಕ ಡಾ. ಎಂಎಂ ಕಲಬುರ್ಗಿ ಅವರನ್ನು ಕಳೆದ ಆಗಸ್ಟ್ 30ರಂದು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ತಮ್ಮ ವಿಚಾರವಾದಗಳಿಂದಲೇ  ಹಿಂದೂಪರ ಸಂಘಟನೆಗಳಿಂದ ಬೆದರಿಕೆ ಎದುರಿಸುತ್ತಿದ್ದ ಕಲಬುರ್ಗಿ ಅವರನ್ನು ಅವರ ಮನೆಯಲ್ಲಿಯೇ ಗುಂಡುಹಾರಿಸಿ ಕೊಲ್ಲಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಒಡಿ ಅಧಿಕಾರಿಗಳು  ನಡೆಸುತ್ತಿದ್ದು, ಇತ್ತೀಚೆಗಷ್ಟೇ ಶಂಕಿತ ಹಂತಕನ ರೇಖಾ ಚಿತ್ರ ಬಿಡುಗಡೆಯಾಗಿತ್ತು. ಇದೀಗ ಬೆಳಗಾವಿಯಲ್ಲಿ ಶಂಕಿತ ಹಂತಕನ ರೇಖಾಚಿತ್ರ ಹೋಲುವ ವ್ಯಕ್ತಿ ಶವ ದೊರೆತಿರುವುದು ಹಲವು  ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿ. 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿ

ಕುಡುಕರಿಗೊಬ್ಬ, ಬ್ಯಾಚುಲರ್‌ಗಳಿಗೆ ಮತ್ತೊಬ್ಬ ದೇವರು: ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ: 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆ

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ನಾಲ್ವರು ಯುವಕರ ದುರ್ಮರಣ

Imran Khan ಸಾವಿನ ಊಹಾಪೋಹ ನಡುವೆ ಜೈಲಿನಲ್ಲಿ ಮಾಜಿ ಪ್ರಧಾನಿ ಭೇಟಿಯಾಗಿ ಬಂದ ಸಹೋದರಿ ಉಜ್ಮಾ ಖಾನಮ್ ಹೇಳಿದ್ದೇನು?

SCROLL FOR NEXT