ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಪೇದೆಯನ್ನೇ ಹಿಡಿದ ಪೊಲೀಸರು

ಕಾನೂನು, ಸುವ್ಯವಸ್ಥೆ ಕಾಪಾಡುವ ಪೊಲೀಸರು ಜನರಿಗೆ ರೋಲ್ ಮಾಡಲ್ . ಆದರೆ, ಆ ರೋಲ್ ಮಾಡಲ್‍ಗಳೇ ತಪ್ಪು ಮಾಡಿದರೆ?...

ಬೆಂಗಳೂರು: ಕಾನೂನು, ಸುವ್ಯವಸ್ಥೆ ಕಾಪಾಡುವ ಪೊಲೀಸರು ಜನರಿಗೆ ರೋಲ್  ಮಾಡಲ್ . ಆದರೆ, ಆ ರೋಲ್ ಮಾಡಲ್‍ಗಳೇ ತಪ್ಪು ಮಾಡಿದರೆ? ಅಂಥವರನ್ನೂ ಸಂಚಾರ ಪೊಲೀಸರು ಬಿಡುವುದಿಲ್ಲ. ಅಂಥ ಪ್ರಸಂಗ ನಗರದಲ್ಲಿ ನಡೆದಿದ್ದು, ಕುಡಿದು ವಾಹನ ಓಡಿಸುತ್ತಿದ್ದ ಪೇದೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ನೋ ಪಾರ್ಕಿಂಗ್‍ನಲ್ಲಿ ನಿಂತಿದ್ದ ಪೊಲೀಸ್ ವಾಹನದ ಚಕ್ರಕ್ಕೆ ಲಾಕರ್ ಹಾಕಿ ದಂಡ ವಿಧಿಸಿದ್ದು, ಹೆಲ್ಮೆಟ್ ಹಾಕದ ಸಿಬ್ಬಂದಿಗೆ ದಂಡ ವಿಧಿಸಿದ್ದು ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸಿದ ಪೊಲೀಸ್ ಸಿಬ್ಬಂದಿಗೆ, ಇತರೆ ಸರ್ಕಾರಿ ಅಧಿಕಾರಿಗಳಿಗೆ ದಂಡ ವಿಧಿಸಿರುವ ಉದಾಹರಣೆಗಳಿವೆ. ಈಗ ಮದ್ಯಸೇವಿಸಿದ ಪೊಲೀಸ್ ಪೇದೆಯ ಸರದಿ.

ಕೇಸು ದಾಖಲಿಸದಿರಲು ಮನವಿ: ಉಪ್ಪಾರ ಪೇಟೆ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯೊಬ್ಬರು ಅ.20ರಂದು ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುವಾಗ ಮದ್ಯ ಸೇವಿಸಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಮಾರ್ಗದಲ್ಲಿ ಪೊಲೀಸರು ಪರಿಶೀಲಿಸಿದರು. ಇದರಿಂದ ಗಾಬರಿಗೊಂಡ ಅವರು ತಕ್ಷಣ ತಾನು ಪೊಲೀಸ್ ಎಂದು ಹೇಳಿ ದಂಡ ವಿಧಿಸದಂತೆ ಮನವಿ ಮಾಡಿದ್ದಾರೆ. ಆದರೂ ಕಾನೂನು ಪಾಲಕರೇ ಹೀಗೆ ತಪ್ಪು ಮಾಡುವುದು ಸರಿಯಲ್ಲ ಎಂದು ಪೊಲೀಸರು ದಂಡ ವಿಧಿಸಿ, ಪ್ರಕರಣವನ್ನು ನ್ಯಾಯಾಲಯಕ್ಕೆ ಕಳುಹಿಸಿದ್ದಾರೆ.

ಅಮಾನತ್ತಿನ ಶಿಕ್ಷೆ: ಮದ್ಯ ಸೇವಿಸಿ ವಾಹನ ಚಾಲನೆ ಮಾಡುವುದು ಸರಿಯಲ್ಲ. ಅದರಲ್ಲೂ
ಕಾನೂನು ಪಾಲಕರೇ  ಹೀಗೆ ಮಾಡುವುದು ಇಲಾಖೆಗೂ ಶೋಭೆಯಲ್ಲ. ಆದ್ದರಿಂದ ಅವರನ್ನು ಇಲಾಖಾ ವಿಚಾರಣೆಗೊಳಪಡಿಸಲು ಸೂಚಿಸಲಾಗಿದೆ. ಸದ್ಯ ಅವರನ್ನು ಅಮಾನತು ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಎಷ್ಟು ದಿನ ಅಮಾನತ್ತಿನಲ್ಲಿಡಬೇಕು ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಿದ್ದಾರೆ.

3 ಸಾವಿರ ದಂಡ?
ಮದ್ಯಪಾನ ಸೇವಿಸಿ ವಾಹನ ಚಾಲನೆ ಮಾಡುವ ಪ್ರಕರಣಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕಳುಹಿಸುತ್ತಾರೆ. ಈ ತಪ್ಪಿಗೆ 2,500ರಿಂದ 3 ಸಾವಿರ ದಂಡ ವಿಧಿಸಲಾಗುತ್ತದೆ. ದಂಡ ವಿಧಿಸುವುದು ನ್ಯಾಯಾಧೀಶರಿಗೆ ಬಿಟ್ಟ ವಿಚಾರ.ಪ್ರಕರಣವನ್ನು 2ನೇ ಟ್ರಾಫಿಕ್ ಕೋರ್ಟ್‍ಗೆ ಕಳುಹಿಸಲಾಗಿದೆ. ರಜೆ ಇರುವ ಕಾರಣ ಪ್ರಕರಣ ವಿಚಾರಣೆ ಹಾಗೂ ಶಿಕ್ಷೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT