ಈಶ್ವರಪ್ಪ 
ಜಿಲ್ಲಾ ಸುದ್ದಿ

ಕಾಲಹರಣ ಸಾಕು, ದಲಿತರ ಅಭಿವೃದ್ಧಿಗೆ ಗಮನ ಹರಿಸಿ: ಈಶ್ವರಪ್ಪ

ಸಿಎಂ ಸ್ಥಾನ ಸಿಗುವವರೆಗೆ ದಲಿತರು, ಹಿಂದುಳಿದವರ ಅಭಿವೃದ್ಧಿಯ ಮಾತನಾಡಿದ್ದ ಸಿದ್ದರಾಮಯ್ಯ ಅವರು ಈಗ ಮೈತೊಳೆದ ಎತ್ತಿನಂತಾಗಿದ್ದಾರೆ.

ಬೆಂಗಳೂರು: ಸಿಎಂ ಸ್ಥಾನ ಸಿಗುವವರೆಗೆ ದಲಿತರು, ಹಿಂದುಳಿದವರ ಅಭಿವೃದ್ಧಿಯ ಮಾತನಾಡಿದ್ದ ಸಿದ್ದರಾಮಯ್ಯ ಅವರು ಈಗ ಮೈತೊಳೆದ ಎತ್ತಿನಂತಾಗಿದ್ದಾರೆ. ಆದರೆ ಈ ಎತ್ತನ್ನು ನಾವು ಸುಮ್ಮನೆ ಬಿಡುವುದಿಲ್ಲ. ಯಾವ ದಲಿತರು, ಹಿಂದುಳಿದವರು ನಿಮಗೆ ಓಟು ಕೊಟ್ಟಿದ್ದಾರೋ, ಅವರ ಅಭಿವೃದ್ಧಿಗೆ ಕೆಲಸ ಮಾಡುವವರೆಗೆ ನಾವು ಹೋರಾಟ ಮಾಡುತ್ತೇವೆ ಎಂದು ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ.

ನಗರದ ಮಲ್ಲೇಶ್ವರದ ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ನಡೆದ ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಂತ್ಯೋದಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಎರಡೂ ವರೆ ವರ್ಷ ಕಾಲ ಹರಣ ಮಾಡಿದ್ದು ಸಾಕು. ಇನ್ನಾದರೂ ದಲಿತರು ಹಿಂದುಳಿದವರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಿ. ಬಜೆಟ್ ನಲ್ಲಿ ಮೀಸಲಿಟ್ಟ ಹಣವನ್ನು ಖರ್ಚು ಮಾಡಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಬಿಜೆಪಿಯು ಜನಜಾಗೃತಿ ಮೂಡಿಸಲು ಸರ್ಕಾರವನ್ನು ಎಚ್ಚರಿಸಲು ಹೋರಾಟ ಮಾಡುತ್ತದೆ ಎಂದರು.
ಬಜೆಟ್ ನಲ್ಲಿ ಏನು ಘೋಷಣೆ ಮಾಡಿದ್ದೀರಿ, ಯೋಜನೆಗಳು ಯಾವುದು ಎಂದು ನಿಮಗೂ ಗೊತ್ತಿಲ್ಲ. ನಿಮ್ಮ ಸಮಾಜ ಕಲ್ಯಾಣ ಸಚಿವರಿಗೂ ಗೊತ್ತಿಲ್ಲ. ಹೀಗಾಗಿ ಯೋಜನೆಗಳ ಜಾರಿ ಎಲ್ಲಿಂದ ಬಂತು ಎಂದು ಮುಖ್ಯಮಂತ್ರಿ ಅವರನ್ನು ಟೀಕಿಸಿದರು.
ಬಿಜೆಪಿಯನ್ನು ಟೀಕಿಸದೇ ಊಟ ಸೇರಲ್ಲ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಮತ್ತು ನರೇಂದ್ರ ಮೋದಿಯವರನ್ನು ಟೀಕಿಸದೇ ಊಟ ಸೇರುವುದಿಲ್ಲ ಎಂದು ಈಶ್ವರಪ್ಪ ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT