ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಕೆಲಸದ ಮನೆ ದೋಚಿದ್ದ ಮಹಿಳೆ ಸೆರೆ

ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಆಭರಣ ದೋಚಿದ್ದ ಮನೆಕೆಲಸದ ಮಹಿಳೆಯನ್ನು ವಿಲ್ಸನ್‍ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ....

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಆಭರಣ ದೋಚಿದ್ದ ಮನೆಕೆಲಸದ ಮಹಿಳೆಯನ್ನು ವಿಲ್ಸನ್‍ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಕೆ.ಆರ್.ನಗರ ತಾಲ್ಲೂಕಿನ ಕಾಮೇನಹಳ್ಳಿಯ ಸುಜಾತ (26) ಬಂಧಿತ ಮಹಿಳೆ. ಆಕೆಯಿಂದ ರೂ.7 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ವಿಲ್ಸನ್‍ಗಾರ್ಡನ್ ವ್ಯಾಪ್ತಿಯ ಅಪಾರ್ಟ್ ಮೆಂಟ್‍ವೊಂದರಲ್ಲಿ ವಾಸಿಸುತ್ತಿದ್ದ ಕುಮಾರ್ ಎಂಬುವವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಕಬ್ಬಾಳಮ್ಮ ಏಜೆನ್ಸಿಯಿಂದ ಆಕೆಯನ್ನು ಕೆಲಸಕ್ಕೆ ನಿಯೋಜಿಸಲಾಗಿತ್ತು.  ಮನೆ ಮಾಲಿಕರ ಕಣ್ತಪ್ಪಿಸಿ ಆಭರಣ ಕಳವು ಮಾಡಿ ನಂತರ ಕೆಲಸ ಬಿಟ್ಟಿದ್ದಳು. ದೂರು ದಾಖಲಿಸಿದ್ದ ಕುಮಾರ್, ಸುಜಾತಾ ಕೆಲಸ ಬಿಟ್ಟ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಳವಾಗಿದ್ದ ಚಿನ್ನದಲ್ಲಿ 30 ಗ್ರಾಂ. ಮಾತ್ರ ಮಾರಾಟ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ನಿದ್ದೆ ಮಾತ್ರೆ ನುಂಗಿಸಿ ಕಳವು
ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ಕುಮಾರ್ ಅವರ ಪುತ್ರ ದಿನೇಶ್ ಮತ್ತು ಸೊಸೆ ಸಾಫ್ಟ್ ವೇರ್ ಕಂಪೆನಿ ಉದ್ಯೋಗಿಗಳು. ಅವರು ಕೆಲಸಕ್ಕೆ ಹೋದ ನಂತರ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರ್ ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ ಅವರಿಗೆ ಊಟ ಕೊಡುವ ನೆಪದಲ್ಲಿ ನಿದ್ರೆ ಮಾತ್ರೆ ನುಂಗಿಸಿ ಈ ಕೃತ್ಯವೆಸಗಿದ್ದಾಳೆ. ಆಕೆ ಪತಿ ಕೂಲಿ ಕೆಲಸ ಮಾಡುತ್ತಿದ್ದು, ಕಳವು ಮಾಡಿದ ಆಭರಣವನ್ನು ಪ್ರಿಯಕರನಿಗೆ ನೀಡುತ್ತಿದ್ದಳು. ಈ ಸಂಬಂಧ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆಭರಣ ಪಡೆಯುತ್ತಿದ್ದ ಆತ ಅವುಗಳನ್ನು ಗಿರವಿ ಇಟ್ಟು ಹಣ ಕೊಡುತ್ತಿದ್ದೆ ಎಂದು ತಿಳಿಸಿದ್ದಾನೆ. ಆದರೆ, ಆಕೆ ಪತಿಗೆ ಕಳವು ಹಾಗೂ ಸಂಬಂಧದ ಬಗ್ಗೆ ಅರಿವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT