ಅನಧಿಕೃತ ನೀರಿನ ಸಂಪರ್ಕ(ಸಾಂಕೇತಿಕ ಚಿತ್ರ) 
ಜಿಲ್ಲಾ ಸುದ್ದಿ

ನೀರಿನ ಅನಧಿಕೃತ ಸಂಪರ್ಕ ಪಡೆದುಕೊಂಡೀರಿ ಜೋಕೆ!

ನಗರದ ನಿವಾಸಿಗಳೇ ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರಿ ಜೋಕೆ! ಹೌದು... ಇಂತಹ ಖಡಕ್ ಎಚ್ಚರಿಕೆಯನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಟಿಎಂ ವಿಜಯ್ ಭಾಸ್ಕರ್ ನೀಡಿದ್ದಾರೆ.

ಬೆಂಗಳೂರು: ನಗರದ ನಿವಾಸಿಗಳೇ ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರಿ ಜೋಕೆ!
ಹೌದು... ಇಂತಹ ಖಡಕ್ ಎಚ್ಚರಿಕೆಯನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಟಿಎಂ ವಿಜಯ್ ಭಾಸ್ಕರ್ ನೀಡಿದ್ದಾರೆ. ಅನಧಿಕೃತ ಸಂಪರ್ಕ ಪಡೆದವರಿಗೆ ದಂಡ, ದುಪ್ಪಟ್ಟು ಶುಲ್ಕ ವಿಧಿಸಲು ಅವರು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಅಧಿಕೃತ ಸಂಪರ್ಕದ ಜೊತೆಗೆ ಮತ್ತೊಂದು ಅನಧಿಕೃತ ಬೈಪಾಸ್ ಸಂಪರ್ಕ ಹೊಂದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರು ಈ ನಿರ್ಧಾರ ಕೈಗೊಂಡರು. ಅಲ್ಲದೇ ಇದೇ ನೀತಿಯನ್ನು ಪಾಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ರಾಮಮೂರ್ತಿನಗರ ಸೇವಾಠಾಣೆ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದರು. ಸುಬ್ರಮಣ್ಯಪುರ ಬಡಾವಣೆಯಲ್ಲಿ ಅನಧಿಕೃತ ಸಂಪರ್ಕಗಳ ವಿಷಯ ತಿಳಿದು, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಮಳೆ ನೀರು ಕೊಯ್ಲು ಅಳವಡಿಕೆ ಮಾಡದ, ಗೃಹ ಬಳಕೆ ಕಟ್ಟಡವನ್ನು ಅನ್ಯ ಬಳಕೆಗೆ ಬದಲಾವಣೆ ಮಾಡಿಕೊಂಡ ಪ್ರಕರಣವನ್ನು ಅವರು ಪತ್ತೆ ಹಚ್ಚಿದರು. ಕಾಲಮಿತಿಯಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದರು.
ಮನೆಯ ಆರ್.ಆರ್ ಸಂಖ್ಯೆ, ಕೆಇಬಿ ಸಂಖ್ಯೆ, ಗೃಹ ಬಳಕೆಯೇ, ಅನ್ಯ ಬಳಕೆಯೇ, ಕಟ್ಟಡ ಅಂತಸ್ತು, ನೀರಿನ ಬಳಕೆ ಪ್ರಮಾಣ, ಮಾಹಿತಿಯನ್ನು ಮನೆಯ ಭಾವಚಿತ್ರದೊಂದಿಗೆ ಸಂಗ್ರಹಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT