ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮುಖ್ಯಮಂತ್ರಿ ಗೋಮಾಂಸ ಹೇಳಿಕೆಗೆ ಬಿಜೆಪಿ ಆಕ್ರೋಶ

ಗೋಮಾಂಸ ಭಕ್ಷಣೆ ಕುರಿತಂತೆ ನೀಡಿರುವ ಹೇಳಿಕೆ ಮುಂದಿಟ್ಟುಕೊಂಡು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮುಗಿಬಿದ್ದಿದ್ದಾರೆ. ಸಿಎಂ ರಾಜಿನಾಮೆಗೆ ಆಗ್ರಹಿಸಿರುವ ಪಕ್ಷ, ಹೇಳಿಕೆ ಖಂಡಿಸಿ ಸೋಮವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ...

ಮಡಿಕೇರಿ: ಗೋಮಾಂಸ ಭಕ್ಷಣೆ ಕುರಿತಂತೆ ನೀಡಿರುವ ಹೇಳಿಕೆ ಮುಂದಿಟ್ಟುಕೊಂಡು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮುಗಿಬಿದ್ದಿದ್ದಾರೆ. ಸಿಎಂ ರಾಜಿನಾಮೆಗೆ ಆಗ್ರಹಿಸಿರುವ ಪಕ್ಷ, ಹೇಳಿಕೆ ಖಂಡಿಸಿ ಸೋಮವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಪುತ್ರನ ಮದುವೆಗೆ ಕುಶಾಲನಗರಕ್ಕೆ ಆಗಮಿ ಸಿದ್ದ ಪಕ್ಷದ ಮುಖಂಡರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಿಎಂ ವಿರುದ್ಧ ಕಿಡಿಕಾರಿದರು. ತಾನೂ ಗೋಮಾಂಸ ಭಕ್ಷಿಸುವುದಾಗಿ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ವಿವೇಚನಾರಹಿತರಾಗಿ ಮಾತನಾಡಿದ್ದಾರೆ. ತಮ್ಮ ಸ್ಥಾನದ ಘನತೆಗೆ ಚ್ಯುತಿ ತಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಟೀಕಿಸಿದರೆ, ನಿಮ್ಮ ಪಾಡಿಗೆ ನೀವು ಗೋಮಾಂಸ ತಿನ್ನುತ್ತಿರಿ, ರಾಜ್ಯದ ಜನ ಪಾಠ ಕಲಿಸುತ್ತಾರೆ ಎಂದು ಸಂಸದ
ಯಡಿಯೂರಪ್ಪ ವ್ಯಂಗ್ಯವಾಡಿದರು.

04 ಗೋಮಾಂಸ ಪೌಷ್ಟಿಕ ಆಹಾರ ಎಂಬ ಲೇಖನ ಪ್ರಕಟಿಸಿದ ಸಂಪಾದಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಮಾತನಾಡಿ, ಬಿಜೆಪಿ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯಿದೆಯನ್ನೇ ರದ್ದುಗೊಳಿಸಿದ ಕಾಂಗ್ರೆಸ್ ಸರ್ಕಾರ ಇದೀಗ ಹಿಂದೂಗಳ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಗೋಹತ್ಯೆಗೆ ಪ್ರೇರಣೆ ನೀಡುವ ಹೇಳಿಕೆ ಮೂಲಕ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ಟೀಕಿಸಿದರು.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು, ಸೋನಿಯಾ ಗಾಂಧಿ ಅವರನ್ನು ಓಲೈಸಲು ಸಿದ್ದರಾಮಯ್ಯ ಗೋಮಾಂಸ ತಿನ್ನುವ ಹೇಳಿಕೆ ನೀಡಿದ್ದಾರೆ. ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿ ಮಾತನಾಡಿರುವ ಅವರು ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆಯಬೇಕೆಂದು ಆಗ್ರಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ, ಸಿಎಂ ಹಂದಿ ಮಾಂಸವನ್ನೂ ತಿನ್ನಲಿ, ಅವರನ್ನು ತಡೆಯೋರ್ಯಾರು? ಆದರೆ ಸಿದ್ದರಾಮಯ್ಯರಿಗೆ ಗೋಮಾಂಸ ಜಗಿಯುವ ಖಯಾಲಿ ಅಧಿಕಾರಕ್ಕೆ ಮುನ್ನ ಬಾರದೆ ಮುಖ್ಯಮಂತ್ರಿಯಾದ ಮೇಲೆ ಯಾಕೆ ಬಂತು. ಹಿಂದುಗಳನ್ನು ಅಪಮಾನ ಮಾಡುವ ಉದ್ದೇಶದಿಂದಲೇ ಇಂತಹ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಜಯಪುರದಲ್ಲಿ ಹೇಳಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT