ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹಾಸನ ಇನ್ಸ್ ಪೆಕ್ಟರ್ ಮೇಲೆ ಮರಳು ಮಾಫಿಯಾ ಹಲ್ಲೆ

ಅಕ್ರಮ ಮರಳು ಸಾಗಣೆ ಲಾರಿಗಳ ಮೇಲೆ ದಾಳಿ ಮಾಡಲು ಹೋದ ಜಿಲ್ಲಾ ಅಪರಾಧ ದಳ (ಡಿಸಿಬಿ) ಇನ್ಸ್‍ಪೆಕ್ಟರ್ ಮೇಲೆ ಮರಳು ಮಾಫಿಯಾ ಶುಕ್ರವಾರ ಮಾರಣಾಂತಿಕ ಹಲ್ಲೆ ನಡೆಸಿದೆ...

ಹಾಸನ: ಅಕ್ರಮ ಮರಳು ಸಾಗಣೆ ಲಾರಿಗಳ ಮೇಲೆ ದಾಳಿ ಮಾಡಲು ಹೋದ ಜಿಲ್ಲಾ ಅಪರಾಧ ದಳ (ಡಿಸಿಬಿ) ಇನ್ಸ್‍ಪೆಕ್ಟರ್ ಮೇಲೆ ಮರಳು ಮಾಪಿsಯಾ ಶುಕ್ರವಾರ ಮಾರಣಾಂತಿಕ ಹಲ್ಲೆ ನಡೆಸಿದೆ.

ತೀವ್ರ ಗಾಯಗೊಂಡಿರುವ ಮಂಜೇಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಅನಧಿಕೃತವಾಗಿ ಮರಳು ಸಾಗಿಸುತ್ತಿದ್ದ 4 ಲಾರಿಗಳನ್ನು ವಶಪಡಿಸಿಕೊಂಡಿದ್ದ ಮಂಜೇಗೌಡ ಮತ್ತು ತಂಡ ಶುಕ್ರವಾರ ಬೆಳಗ್ಗೆಯೂ ನಗರದ ಚನ್ನಪಟ್ಟಣ ಬೈಪಾಸ್ ರಸ್ತೆಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ನಿಂತಿದ್ದ ಲಾರಿಗಳನ್ನು ಪರಿಶೀಲಿಸ ತೊಡಗಿದರು.

4 ಲಾರಿಗಳನ್ನು ವಶಕ್ಕೆ ತೆಗೆದುಕೊಂಡ ಬಳಿಕ ನಾಲ್ವರು ಪೇದೆ ಗಳು ಲಾರಿಗಳೊಂದಿಗೆ ಠಾಣೆಗೆ ತೆರಳಿದರು. ಈ ಸಂದರ್ಭದಲ್ಲಿ ಇನ್ಸ್‍ಪೆಕ್ಟರ್, ಅವರ ಜೀಪ್ ಚಾಲಕನ ಮೇಲೆ 30ಕ್ಕೂ ಹೆಚ್ಚು ಮಂದಿ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಬಗ್ಗೆ ದೂರುಗಳು ಬಂದಿದ್ದರಿಂದ ಅದನ್ನು ತಡೆಗಟ್ಟಲು ಡಿಸಿಬಿ ಇನ್ಸ್‍ಪೆಕ್ಟರ್ ಮಂಜೇಗೌಡ ನೇತೃತ್ವದ ತಂಡ ಕಾರ್ಯನಿರ್ವಹಿಸುವಂತೆ ನಾನೇ ಸೂಚಿಸಿದ್ದೆ. ಹಲ್ಲೆ ಮಾಡಿರುವ ಆರೋಪಿಗಳ ಬಂಧನಕ್ಕೆ 2 ತಂಡಗಳನ್ನು ರಚಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ತಂಡಗಳನ್ನು ರಚಿಸಲಾಗುತ್ತದೆ.
- ರಮಣ ಗುಪ್ತ ಎಸ್ಪಿ ಹಾಸನ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT