ರಾಜ್ಯೋತ್ಸವ ಆಚರಣೆ (ಕೃಪೆ: ಕೆಪಿಎನ್ ) 
ಜಿಲ್ಲಾ ಸುದ್ದಿ

ರಾಜ್ಯೋತ್ಸವ ಸೀಮಿತ ಆಚರಣೆ ಆದೇಶ ವಾಪಸ್

ಕರ್ನಾಟಕ ರಾಜ್ಯೋತ್ಸವದ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಯನ್ನು ಒಂದು ವಾರಕ್ಕೆ ಸೀಮಿತಗೊಳಿಸಿ ನೀಡಿದ್ದ ನಿರ್ದೇಶನವನ್ನು...

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಯನ್ನು ಒಂದು ವಾರಕ್ಕೆ ಸೀಮಿತಗೊಳಿಸಿ ನೀಡಿದ್ದ ನಿರ್ದೇಶನವನ್ನು ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಖ್ ಹಿಂಪಡೆದಿದ್ದಾರೆ. ಎಂದಿನಂತೆ ಈ ಬಾರಿಯೂ ತಿಂಗಳು ಪೂರ್ತಿ ಉತ್ಸವ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಹೇಳಿ ದ್ದಾರೆ. ರಾಜ್ಯೋತ್ಸವದ ಹಿನ್ನೆಲೆ  ಯಲ್ಲಿ ರಸ್ತೆಗಳಲ್ಲಿ ಪೆಂಡಾಲ್ ಗಳ ನ್ನು ಹಾಕುವುದರಿಮದ ಸಂಚಾರಕ್ಕೆ ಆಡಚಣೆಯಾಗಿ ಜನ ಸಂಕಷ್ಟ ಅನುಭವಿಸುವು ದನ್ನು ತಪ್ಪಿಸುವ ಉದ್ದೇಶದಿಂದ ಆಚರಣೆಗೆ ವಾರದ ಮಿತಿ ಹಾಕಿ ನಿರ್ಧಾರ ಕೈಗೊಳ್ಳಲಾಗಿತ್ತು.
ಅಲ್ಲದೇ, 7 ದಿನಕ್ಕೂ ಹೆಚ್ಚಿನ ದಿನ ಆಚರಿಸುವಂತಿದ್ದರೆ, ಸಾರ್ವಜನಿಕ ಮೈದಾನಗಳಲ್ಲಿ ಆಯೋಜಿಸಬಹುದು ಎಂದು ಹೇಳಲಾಗಿತ್ತು. ಆದರೆ, ಇದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹಿರಿಯ ಅಧಿಕಾರಿ ಹೇಳಿದರು. ಉತ್ಸವ ಸೀಮಿತಗೊಳಿಸುವ ಹಿಂದೆ ಇಲಾಖೆಗೆ ಬೇರೆ ಉದ್ದೇಶವಿರಲಿಲ್ಲ.ಸ್ಥಳೀಯ ಪೊಲೀಸರಿಂದ ಅನುಮತಿ ಪಡೆದು ರಾಜ್ಯೋತ್ಸವ ಆಚರಿಸಲು ಇಲಾಖೆಯ ಸಹಮತವಿ ದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT