ಮೃತ ಚಿಂಪಾಂಜಿ ಮಿರೆಲ್ಲಾ 
ಜಿಲ್ಲಾ ಸುದ್ದಿ

ಚಿಂಪಾಂಜಿ ಮಿರೆಲ್ಲಾ ಸಾವಿಗೆ ವಿಷಪ್ರಾಶನ ಕಾರಣ

ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯದಲ್ಲಿ ಜೂನ್ 2 ನೇ ತಾರೀಕಿನಂದು ಮೃತಪಟ್ಟ ಹೆಣ್ಣು ಚಿಂಪಾಂಜಿ ಮಿರೆಲ್ಲಾ ಸಾವಿಗೆ ವಿಷಪ್ರಾಶನ ಕಾರಣ...

ಮೈಸೂರು: ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯದಲ್ಲಿ ಜೂನ್  2 ನೇ ತಾರೀಕಿನಂದು ಮೃತಪಟ್ಟ ಹೆಣ್ಣು ಚಿಂಪಾಂಜಿ ಮಿರೆಲ್ಲಾ ಸಾವಿಗೆ ವಿಷಪ್ರಾಶನ ಕಾರಣ ಎಂದು ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಪ್ರಯೋಗಾಲಯ ವರದಿ ನೀಡಿದೆ

ಜುಲೈ 13 ರಂದು ಪ್ರಯೋಗಾಲಯದ ಪರೀಕ್ಷಾ ವರದಿ ಸಲ್ಲಿಕೆ ಮಾಡಲಾಗಿದೆ. ಮಾನವರು ಆತ್ಮಹತ್ಯೆಗೆ ಬಳಸುವಂಥ ರಾಸಾಯನಿಕದ ಅಂಶ ಚಿಂಪಾಂಜಿಯ ಹೊಟ್ಟೆಯಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಆರಾಮವಾಗಿ ಓಡಾಡಿಕೊಂಡಿದ್ದ ಮಿರೆಲ್ಲಾ ಜೂನ್ 29 ರಂದು ಇದ್ದಕ್ಕಿದ್ದಂತೆ ಸಾವಿಗೀಡಾಗಿತ್ತು. ಮೃಗಾಲಯದ ಅಧಿಕಾರಿಗಳು ಚಿಂಪಾಂಜಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಿಕೆ ನೀಡಿದ್ದರು.

ಖಾಸಗಿ ಪ್ರಯೋಗಾಲಯದ ವರದಿಯಲ್ಲೂ ಚಿಂಪಾಂಜಿ ವಿಶಪ್ರಾಶನದಿಂದಲೇ ಸಾವನ್ನಪ್ಪಿದೆ ಎಂದು ಹೇಳಲಾಗಿತ್ತು. ಸಿಬ್ಬಂದಿಯನ್ನು ಸಹ ತನಿಖೆಗೆ ಒಳಪಡಿಸಲಾಗಿದ್ದು ಹೇಗೆ ಸಾವು ಸಂಭವಿಸಿದೆ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಹಿಂದೆ ಸಹ  ಸಿಂಹವೊಂದಕ್ಕೆ ವಿಶಪ್ರಾಶನ ಮಾಡಿದ ಪ್ರಕರಣ ಮೈಸೂರು ಮೃಗಾಲಯದಲ್ಲಿ ನಡೆದಿತ್ತು. ಮೃಗಾಲಯಗಳ ಪ್ರಾಣಿ ವಿನಿನಿಮಯ ಯೋಜನೆಯಡಿ ಸ್ವೀಡನ್ ನ ಕೋಲ್ ಮಾರ್ಡೆನ್ ವನ್ಯಜೀವಿ ಧಾಮಕ್ಕೆ 1994 ರಲ್ಲಿ ಭಾರತದ ಒಂದು ಆನೆಯನ್ನು ಕೊಟ್ಟು 5 ಚಿಂಪಾಂಜಿಗಳನ್ನು ತರಲಾಗಿತ್ತು. ಈ ಪೈಕಿ 2 ಚಿಂಪಾಂಜಿಗಳು ಮಾತ್ರ ಬದುಕುಳಿದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT