(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ತಾಯಿಗೆ ಕಾಯಿಲೆ: ನೊಂದ ನಿರ್ದೇಶಕ ಆತ್ಮಹತ್ಯೆ

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಕಷ್ಟ ನೋಡಲಾಗದೆ ನೊಂದ ಮಗ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಜಯ್ ನಗರ ಕೆಇಬಿ ಬಡಾವಣೆಯಲ್ಲಿ ನಡೆದಿದೆ...

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಕಷ್ಟ ನೋಡಲಾಗದೆ ನೊಂದ ಮಗ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಜಯ್ ನಗರ ಕೆಇಬಿ ಬಡಾವಣೆಯಲ್ಲಿ ನಡೆದಿದೆ.

ನಿರ್ದೇಶಕ, ಟಿವಿ ವಾಹಿನಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿ ಕೊಡುತ್ತಿದ್ದ ಹೋಮಿಯೋಪಥಿ ವೈದ್ಯ ಉಮಾಶಂಕರ್ (61)ಆತ್ಮಹತ್ಯೆ ಮಾಡಿಕೊಂಡವರು. ಹೆತ್ತವಳ ಕೂಗು, ಸಿಬಿಐ ವಿಜಯ್ ಚಿತ್ರಗಳನ್ನು ನಿರ್ದೇಶಿರುವ ಉಮಾಶಂಕರ್ ಚಿತ್ರರಂಗದಿಂದ ದೂರ ಸರಿದಿದ್ದರು.

ಜ್ಯೋತಿಷ್ಯ ಹೇಳುವುದರ ಜತೆಗೆ ಹೋಮಿಯೋಪತಿ ವೈದ್ಯರಾಗಿ ಮನೆಯಲ್ಲೆ ಚಿಕಿತ್ಸೆ ನೀಡುತ್ತಿದ್ದರು. ಸುಮಾರು 80 ವರ್ಷದ ತಾಯಿ ಪಾಶ್ರ್ವವಾಯು ಪೀಡಿತರಾಗಿದ್ದು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಬದುಕುಳಿಯುವುದು ಕಷ್ಟ ಎಂದು ವೈದ್ಯರು ತಿಳಿಸಿದ್ದರು ಎನ್ನಲಾಗಿದೆ. ನೊಂದ ಉಮಾಶಂಕರ್ ಮಂಗಳವಾರ ನಸುಕಿನ 4.30ರ ಸುಮಾರು ನೇಣಿಗೆ ಶರಣಾಗಿದ್ದಾರೆ. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೀಟಿ ವಂಚನೆ ಆರೋಪಿ ಬಂಧನ: ಚೀಟಿ ವ್ಯವಹಾರ ನಡೆಸಿ ಸಾರ್ವಜನಿಕರಿಂದ ಕೋಟ್ಯಂತರ ಸಂಗ್ರಹಿಸಿ ತಲೆಮರೆಸಿ- ಕೊಂಡಿದ್ದ ಆರೋಪಿ ಕುಮಾರ್ ಎಂಬಾತನನ್ನು ಜ್ಞಾನಭಾರತಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಲ್ಲತ್ತಹಳ್ಳಿ ಸಮೀಪದ ಐಟಿಐ ಲೇಔಟ್‍ನಲ್ಲಿ 70ಕ್ಕೂ ಹೆಚ್ಚು ಮಹಿಳೆಯರಿಂದ ಚೀಟಿ ವ್ಯವಹಾರದ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ಹಣ ಸಂಗ್ರಹಿಸಿ ತಲೆಮರೆಸಿಕೊಂಡಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!