ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬಾಲ್ಯವಿವಾಹ ತಡೆದ ಅಧಿಕಾರಿಗಳು

ರಾಜಧಾನಿಯಲ್ಲಿ ಬಾಲ್ಯ ವಿವಾಹ ಪದ್ಧತಿ ಚಾಲ್ತಿಯಲ್ಲಿದೆ ಎಂಬುದಕ್ಕೆ ಗುರುವಾರದ ಒಂದು ಪ್ರಕರಣ ನಿದರ್ಶನವಾಯಿತು...

ಬೆಂಗಳೂರು: ರಾಜಧಾನಿಯಲ್ಲಿ ಬಾಲ್ಯ ವಿವಾಹ ಪದ್ಧತಿ ಚಾಲ್ತಿಯಲ್ಲಿದೆ ಎಂಬುದಕ್ಕೆ ಗುರುವಾರದ ಒಂದು ಪ್ರಕರಣ ನಿದರ್ಶನವಾಯಿತು. ಇಂತಹ ಒಂದು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪದ ಮೇಲೆ ದಾಳಿ ನಡೆಸಿದ ಪೊಲೀಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಬಾಲ್ಯ ವಿವಾಹ ತಡೆದಿದ್ದಾರೆ.

15 ವರ್ಷದ ಅಪ್ರಾಪ್ತೆಗೆ ಸಂಬಂಧಿಕ ಉದ್ಯಮಿ ಜತೆಗೆ ಮದುವೆ ನಿಶ್ಚಯಿಸಲಾಗಿತ್ತು. ಚನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿರುವ ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಗುರುವಾರ ಬೆಳಗ್ಗೆ ಮೂಹೂರ್ತ ನಿಗದಿಯಾಗಿತ್ತು. ಆದರೆ, ಅನಾಮಧೇಯ ವ್ಯಕ್ತಿಯೊಬ್ಬ ಮಕ್ಕಳ ಸಹಾಯವಾಣಿಗೆ ಫೋನ್  ಮಾಡಿ, ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಅಪ್ರಾಪ್ತೆಗೆ ಬಲವಂತದ ಮದುವೆ ಮಾಡ ಲಾಗುತ್ತಿದೆ ಎಂದು ದೂರು ನೀಡಿದ್ದ. ಮದುವೆ ಮಂಟಪದ ಮೇಲೆ ದಾಳಿ ನಡೆಸಿದ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀ ಸರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ನಡೆಯುತ್ತಿದ್ದ ಆರತಕ್ಷತೆ ತಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT