ಘಟನಾ ಸ್ಥಳದಲ್ಲಿ ಪೊಲೀಸರು 
ಜಿಲ್ಲಾ ಸುದ್ದಿ

ಅಂತರ್ಜಾತಿ ವಿವಾಹ ದಲಿತರ ಮನೆಗಳು ಜಖಂ

ಅಂತರ್ಜಾತಿ ವಿವಾಹ ಹಿನ್ನೆಲೆಯಲ್ಲಿ ಮಂಡ್ಯ ತಾಲೂಕಿನ ಹುಲಿವಾನದಲ್ಲಿ ಸವರ್ಣೀಯರು ದಲಿತ ಸಮುದಾ ಯದ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿದ್ದಾರೆ...

ಮಂಡ್ಯ: ಅಂತರ್ಜಾತಿ ವಿವಾಹ ಹಿನ್ನೆಲೆಯಲ್ಲಿ ಮಂಡ್ಯ ತಾಲೂಕಿನ ಹುಲಿವಾನದಲ್ಲಿ ಸವರ್ಣೀಯರು ದಲಿತ ಸಮುದಾಯದ ಮೇಲೆ ಗುರುವಾರ ರಾತ್ರಿ ದಾಳಿ ನಡೆಸಿದ್ದಾರೆ. 
ಹಲವರನ್ನು ಥಳಿಸಲಾಗಿದ್ದು, ಕಲ್ಲು ತೂರಾಟ ದಿಂದಾಗಿ ಮನೆಗಳು ಜಖಂ ಗೊಂಡಿವೆ. 8 ಮಂದಿಗೆ ಗಾಯಗಳಾಗಿದ್ದು, ಮೀನಾಕ್ಷಿ ಮತ್ತು ಶ್ರುತಿ ಎಂಬುವರೂ ತೀವ್ರವಾಗಿ ಗಾಯಗೊಂಡಿದ್ದಾರೆ. ದಲಿತಕೇರಿಯ 24 ಮನೆಗಳು ಜಖಂ ಗೊಂಡಿವೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದ್ದು, 15 ಪೊಲೀಸರೂ ಗಾಯಗೊಂಡಿದ್ದಾರೆ. 
ಗ್ರಾಮದ ದಲಿತ ಯುವಕ ಹಾಗೂ ಅದೇ ಗ್ರಾಮದ ಸವರ್ಣೀಯ ಯುವತಿ ಪ್ರೀತಿಸುತ್ತಿದ್ದರು. ಕಳೆದ ಬುಧವಾರ ಮಂಡ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿದ್ದರು. ಮದುವೆಗೆ ಯುವತಿಯ ಪೋಷಕರ ವಿರೋಧವಿತ್ತು. ಕೊನೆಗೆ ಯುವತಿ ಯು ಇನ್ನು ಮುಂದೆ ಮನೆಗೆ ಬರಬಾರದು ಎಂದು ಆಕೆಯಿಂದ ಮುಚ್ಚಳಿಗೆ ಬರೆಸಿ, ಮದುವೆಗೆ ಒಪ್ಪಿಗೆ ನೀಡಿದ್ದರು. ಈ ನಡುವೆ ಸಂತೋಷ್ ನ ಸ್ನೇಹಿತ ಪ್ರದೀಪ್ ಎಂಬುವವರ ಮನೆ ಮೇಲೆ ಬುಧವಾರ ರಾತ್ರಿ ಕೆಲವು ಮಂದಿ ಕಲ್ಲು ತೂರಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರದೀಪ್ ಪ್ರಕರಣ ದಾಖಲಿಸಿದ್ದರು. 
ಕುಪಿತಗೊಂಡ ಸವರ್ಣೀಯರ ಗುಂಪು ಗುರುವಾರ ರಾತ್ರಿ ದಲಿತರ ಕೇರಿಗೆ ನುಗ್ಗಿ ದಾಂಧಲೆ ನಡೆಸಿ, ಸಿಕ್ಕವರನ್ನು ಥಳಿಸಿದೆ. ಮನೆಗಳಿಗೆ ನುಗ್ಗಿ ವಸ್ತುಗಳನ್ನೆಲ್ಲ ನಾಶ ಮಾಡಲಾಗಿದೆ. ಅಲ್ಲದೆ, 2 ಬೈಕ್‍ಗಳಿಗೆ ಬೆಂಕಿ ಇಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲಿಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರಕ್ಕೆ ಮುಂದಾದರು. ಉದ್ರಿಕ್ತರ ಗುಂಪು ಪೊಲೀಸರ ಮೇಲೂ ಕಲ್ಲ ತೂರಿದೆ. ಪರಿಣಾಮ 15 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಗ್ರಾಮದ 50 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಕೆಲವರು ತಲೆ ಮರೆಸಿಕೊಂಡಿದ್ದಾರೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
ಪೊಲೀಸ್ ಬಂದೋಬಸ್ತ್: ಹುಲಿವಾನ ಗ್ರಾಮದಲ್ಲಿ ಉಂಟಾಗಿರುವ ಪ್ರಕ್ಷುಬ್ದ ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಪೆÇಲೀಸ್ ವರಿಷ್ಠಾ„ಕಾರಿ ಪುಟ್ಟಮಾದಯ್ಯ, ಡಿವೈಎಸ್ಪಿ ಉದೇಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT