ಡಾ.ಎಂ.ಎಂ.ಕಲಬುರ್ಗಿ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಡಾ. ಕಲಬುರ್ಗಿ ಸಂಶೋಧನ ಕೇಂದ್ರ

ಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ...

ಧಾರವಾಡ:ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಧಾರವಾಡದಲ್ಲಿ ಅವರ ಹೆಸರಿನಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸಲು ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಸಲಹೆಯಂತೆ ಶನಿವಾರ ಸರ್ಕಾರದ ಪ್ರತಿನಿಧಿಯಾಗಿ ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಡಾ.ಕಲಬುರ್ಗಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಬಸವ ಸಮಿತಿಯಲ್ಲಿ ಕಲಬುರ್ಗಿ ಅವರ ಸ್ಮಾರಕ ಹಾಗೂ ಧಾರವಾಡದಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.ಕಲಬುರ್ಗಿ ಅವರ ಹತ್ಯೆ ಸ್ವತಃ ಮುಖ್ಯಮಂತ್ರಿಯವರಿಗೂ ಬೇಸರ ಮೂಡಿಸಿದ್ದು,ಶೀಘ್ರ ಹಂತಕರನ್ನು ಹಿಡಿಯಬೇಕೆಂಬ ಆದೇಶವನ್ನು ಸಿಐಡಿ ಅಧಿಕಾರಿಗಳಿಗೆ ನೀಡಿದ್ದಾರೆ. ಜತೆಗೆ ಕಲಬುರ್ಗಿ ಹೆಸರು ಉಳಿಸುವ ಕೆಲಸ ಮಾಡಬೇಕೆಂಬ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT