ಡಾ.ಎಂ.ಎಂ.ಕಲಬುರ್ಗಿ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಡಾ. ಕಲಬುರ್ಗಿ ಸಂಶೋಧನ ಕೇಂದ್ರ

ಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ...

ಧಾರವಾಡ:ಖ್ಯಾತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹೆಸರು ಮತ್ತು ಸಾಧನೆ ಅಜರಾಮರವಾಗಿ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಧಾರವಾಡದಲ್ಲಿ ಅವರ ಹೆಸರಿನಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸಲು ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಸಲಹೆಯಂತೆ ಶನಿವಾರ ಸರ್ಕಾರದ ಪ್ರತಿನಿಧಿಯಾಗಿ ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಡಾ.ಕಲಬುರ್ಗಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಬಸವ ಸಮಿತಿಯಲ್ಲಿ ಕಲಬುರ್ಗಿ ಅವರ ಸ್ಮಾರಕ ಹಾಗೂ ಧಾರವಾಡದಲ್ಲಿ ಸಂಶೋಧನ ಕೇಂದ್ರ ಸ್ಥಾಪಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ.ಕಲಬುರ್ಗಿ ಅವರ ಹತ್ಯೆ ಸ್ವತಃ ಮುಖ್ಯಮಂತ್ರಿಯವರಿಗೂ ಬೇಸರ ಮೂಡಿಸಿದ್ದು,ಶೀಘ್ರ ಹಂತಕರನ್ನು ಹಿಡಿಯಬೇಕೆಂಬ ಆದೇಶವನ್ನು ಸಿಐಡಿ ಅಧಿಕಾರಿಗಳಿಗೆ ನೀಡಿದ್ದಾರೆ. ಜತೆಗೆ ಕಲಬುರ್ಗಿ ಹೆಸರು ಉಳಿಸುವ ಕೆಲಸ ಮಾಡಬೇಕೆಂಬ ಆಶಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT