ಪಾಟಾ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿರುವ ಜಾನಪದ ಕಲಾವಿದರ ಮೋಹಕ ನೋಟ. 
ಜಿಲ್ಲಾ ಸುದ್ದಿ

ಇಂದಿನಿಂದ ಪಾಟಾ ಸಮ್ಮೇಳನ

ರಾಜ್ಯದ ವಿವಿಧ ಪ್ರಕಾರದ ಕಲೆ, ಸಂಸ್ಕೃತಿ, ಆಹಾರ ಪ್ರಕಾರಗಳನ್ನು ಜಗತ್ತಿಗೆ ಪರಿಚಯಿಸಲು ಹೊರಟಿರುವ `ಪೆಸಿಪಿsಕ್ ಏಷ್ಯಾ ಟ್ರಾವೆಲ್ ಅಸೋಸಿಯೇಷನ್-2015' (ಪಾಟಾ) ಅದ್ದೂರಿ ಸಮ್ಮೇಳನಕ್ಕೆ ಸಜ್ಜಾಗಿದೆ...

ಬೆಂಗಳೂರು: ರಾಜ್ಯದ ವಿವಿಧ ಪ್ರಕಾರದ ಕಲೆ, ಸಂಸ್ಕೃತಿ, ಆಹಾರ ಪ್ರಕಾರಗಳನ್ನು ಜಗತ್ತಿಗೆ ಪರಿಚಯಿಸಲು ಹೊರಟಿರುವ `ಪೆಸಿಪಿsಕ್ ಏಷ್ಯಾ ಟ್ರಾವೆಲ್ ಅಸೋಸಿಯೇಷನ್-2015' (ಪಾಟಾ) ಅದ್ದೂರಿ ಸಮ್ಮೇಳನಕ್ಕೆ ಸಜ್ಜಾಗಿದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಸೆ.6ರಿಂದ 8ರವರೆಗೆ `ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಅವರು ಶುಕ್ರವಾರ ಸಮಾವೇಶದ ಸಿದಟಛಿತೆಗಳ ಪರಿಶೀಲನೆ ನಡೆಸಿದರು. ಸಮಾವೇಶದ ಮೂಲಕ ರಾಜ್ಯವು ವಿಶ್ವಕ್ಕೆ ತೆರೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಾವಿರಕ್ಕೂ ಹೆಚ್ಚಿನ ವಿದೇಶಿ ಪ್ರತಿನಿಧಿಗಳು ನೋಂದಣಿ ಮಾಡಿಕೊಂಡಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ 1700ಕ್ಕೂ ಹೆಚ್ಚು ಪ್ರತಿನಿಧಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎಂದರು.

ಮೊದಲ ಹೂಡಿಕೆ ಪ್ರವಾಸೋದ್ಯಮ: ಈವರೆಗೆ 37 ಸಮ್ಮೇಳನಗಳು ನಡೆದಿದ್ದು, ಇದೇ ಮೊದಲ ಬಾರಿಗೆ ಇಲ್ಲಿ ಹೂಡಿಕೆ ಪ್ರವಾಸೋದ್ಯಮ (ಇನ್ವೆಸ್ಟ್‍ಮೆಂಟ್ ಟೂರಿಸಂ)ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿ ದೆಹಲಿ, ಹೈದರಾಬಾದ್ ನಂತರ ಬೆಂಗಳೂರಿನಲ್ಲಿ ಸಮ್ಮೇಳನ ಜರುಗುತ್ತಿದೆ. ಹಿಂದಿಗಿಂತಲೂ ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಸಿಂಗಾಪುರ, ಕಾಂಬೋಡಿಯಾ ದೇಶಗಳು ಚಿಕ್ಕ ದೇಶಗಳಾಗಿದ್ದರೂ ಪ್ರವಾಸೋದ್ಯಮದಲ್ಲಿ ಮುಂದಿವೆ. ದೇಶದಲ್ಲಿ ಹಲವು ಕಾರಣಗಳಿಂದ ಪ್ರವಾಸೋದ್ಯಮ ಅಭಿವೃದ್ಧಿ ಹೊಂದುತ್ತಿಲ್ಲ. ದೇಶದಲ್ಲಿ ಪ್ರವಾಸೋದ್ಯಮದ ಜಿಡಿಪಿ ಶೇ.6.3ರಷ್ಟಿದೆ. ರಾಜ್ಯದಲ್ಲಿ ಜೀವವೈವಿಧ್ಯತೆ, ಅಡ್ವೆಂಚರ್, ಐತಿಹಾಸಿಕ, ವನ್ಯಜೀವಿ ಸೇರಿದಂತೆ ಎಲ್ಲ ರೀತಿಯ ಪ್ರವಾಸಿ ತಾಣಗಳಿದ್ದು ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ ಎಂದರು

ಸಮ್ಮೇಳನದಲ್ಲಿ ಜಾನಪದ ನೃತ್ಯರೂಪಕಗಳು ಸಮ್ಮೇಳನವು ಜಾತ್ರೆಯ ಮಾದರಿಯಲ್ಲಿ ಕಳೆಗಟ್ಟುತ್ತಿದೆ. ರಾಜ್ಯದಲ್ಲಿನ ಹಲವು ಜಾನಪದ ಕಲಾ ತಂಡಗಳು ಬೀಡುಬಿಟ್ಟಿದ್ದು, ಮೂರು ದಿನಗಳ ಕಾಲ ನೃತ್ಯಗಳು ವಿಜೃಂಭಿಸಲಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯದ 19 ಮಾದರಿಯ ಕಲಾ ಪ್ರದರ್ಶನಗಳನ್ನು ಪ್ರದರ್ಶಿಸಲಾಗುತ್ತಿದೆ. ರಾಜ್ಯದ 14 ಜಿಲ್ಲೆಯ 314 ಕಲಾವಿದರು ಭಾಗವಹಿಸುತ್ತಿದ್ದಾರೆ. ನಾದಸ್ವರ, ಕಂಸಾಳೆ, ಪಟ ಕುಣಿತ, ಪೂಜಾ ಕುಣಿತ, ವೀರಗಾಸೆ, ಡೊಳ್ಳು ಕುಣಿತ, ಜಗ್ಗಲಿಗೆ, ಯಕ್ಷಗಾನ, ಭರತನಾಟ್ಯ, ಕಹಳೆ, ಲಂಬಾಣಿ ನೃತ್ಯ ಸೇರಿದಂತೆ 19 ಮಾದರಿಯ ಜಾನಪದ ನೃತ್ಯಗಳು ವಿವಿಧ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT