ಪೊಲೀಸರಿಂದ ಮಹಿಳೆಯರ ಮೇಲೆ ಥಳಿತ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮಹಿಳೆಯರ ಮೇಲೆ ಹಲ್ಲೆ: ಸಿಪಿಐ ಅಮಾನತು

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದ ಮಹಿಳೆಯರನ್ನು ಸಾರ್ವಜನಿಕವಾಗಿ ಥಳಿಸಿದ ಘಟನೆಗೆ ಸಂಬಂಧಿಸಿ ಖಡೇಬಜಾರ ಠಾಣೆ ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಓರ್ವ ಎಎಸ್‍ಐ...

ಬೆಳಗಾವಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದ ಮಹಿಳೆಯರನ್ನು ಸಾರ್ವಜನಿಕವಾಗಿ ಥಳಿಸಿದ ಘಟನೆಗೆ ಸಂಬಂಧಿಸಿ ಖಡೇಬಜಾರ ಠಾಣೆ ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಓರ್ವ ಎಎಸ್‍ಐ, ಇಬ್ಬರು ಮಹಿಳಾ ಪೇದೆಗಳನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತ ರವಿ ಎಸ್ ಶನಿವಾರ ರಾತ್ರಿ ಆದೇಶಿಸಿದ್ದಾರೆ.

ಇಲ್ಲಿಯವರೆಗೆ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸಂಖ್ಯೆ ಏಳಕ್ಕೇರಿದೆ. ಎಎಸ್‍ಐ ಎಂ.ಎಸ್.ಖನಗಾಂವಕರ, ಮಹಿಳಾ ಪೇದೆಗಳಾದ ಭಾರತಿ ಚಿಕ್ಕೋಡಿ, ಸುಮಂಗಲಾ   ಡೊಂಬರ ಅವರನ್ನು ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ನಗರದ ಗಣಪತಿ ಗಲ್ಲಿ, ಖಡೇಬಜಾರ, ಮುಂತಾದೆಡೆ ವೇಶ್ಯಾವಾಟಿಕೆ, ಸಣ್ಣಪುಟ್ಟ ಕಳ್ಳತನ ಪ್ರಕರಣಗಳು ನಡೆಯುತ್ತಿವೆ ಎಂಬ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ  ವೇಶ್ಯಾವಾಟಿಕೆ ನಡೆಸುತ್ತಾರೆಂಬ ಗುಮಾನಿ ಇದ್ದ ಕೆಲ ಮಹಿಳೆಯರನ್ನು ಬಂಧಿಸುವ ಸಂದರ್ಭದಲ್ಲಿ ಶುಕ್ರವಾರ ಸಂಜೆ ಮೂವರು ಪೇದೆಗಳು ಮಹಿಳೆಯರನ್ನು ಬಹಿರಂಗವಾಗಿ ಹಿಗ್ಗಾಮುಗ್ಗಾ  ಥಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DMK-AIADMK ಸೇರಿ ಸರ್ಕಾರ ರಚಿಸಿದರೆ 107 TVK ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್ ಬೆದರಿಕೆ

ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್‌.ಎನ್ ರವಿ!

West Bengal: ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊಲೆಗೆ ಬಳಸಲಾಗಿದ್ದ ಬೈಕ್ ವಶಕ್ಕೆ, ಪೊಲೀಸ್ ತನಿಖೆ ಚುರುಕು

ಪಶ್ಚಿಮ ಬಂಗಾಳದ ರಾಜಕೀಯ ಹಿಂಸಾಚಾರ: 13 ವರ್ಷಗಳಲ್ಲಿ ಸುವೇಂದು ಅಧಿಕಾರಿಯ 3 ಆಪ್ತರ ಬರ್ಬರ ಹತ್ಯೆ

IPL 2026: Mitchell Marsh ಸ್ಫೋಟಕ ಶತಕ, RCB ವಿರುದ್ಧ ಬೃಹತ್ ಮೊತ್ತದತ್ತ LSG! ಪಂದ್ಯಕ್ಕೆ ಮಳೆ ಅಡ್ಡಿ

SCROLL FOR NEXT