ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ತ್ರಿಭಜನೆ ಸರ್ಕಾರಕ್ಕೆ ಬಿಟ್ಟದ್ದು: ಕಾಂಗ್ರೆಸ್‍ ಮಾಜಿ ಮೇಯರ್‍

ಬಿಬಿಎಂಪಿ ವಿಭಜನೆ ಮಾಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಕಾಂಗ್ರೆಸ್‍ನ ಮಾಜಿ ಮೇಯರ್‍ಗಳು ಹೇಳಿದ್ದಾರೆ...

ಬೆಂಗಳೂರು: ಬಿಬಿಎಂಪಿ ವಿಭಜನೆ ಮಾಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಕಾಂಗ್ರೆಸ್‍ನ ಮಾಜಿ ಮೇಯರ್‍ಗಳು ಹೇಳಿದ್ದಾರೆ.

ಕಾಂಗ್ರೆಸ್‍ನ ಮಾಜಿ ಮೇಯರ್‍ಗಳಿದ್ದ ಮಾಜಿ ಸಚಿವ ಬಿ.ಎಲ್.ಶಂಕರ್ ನೇತೃತ್ವದ ಸಮಿತಿಯಲ್ಲಿ ಈ ಹಿಂದೆ ಬಿಬಿಎಂಪಿ ವಿಭಜನೆ ಬಗ್ಗೆ ಸವಿವರ ಅಧ್ಯಯನ ವರದಿ ಸಲ್ಲಿಸಿತ್ತು. ಅದೇ ಸಮಿತಿಯಲ್ಲಿದ್ದ ಮಾಜಿ ಮೇಯರ್ ಗಳಾದ ಪಿ.ಆರ್.ರಮೇಶ್, ಹುಚ್ಚಪ್ಪ, ಎಂ. ರಾಮಚಂದ್ರಪ್ಪ ಈಗ ಬಿಬಿಎಂಪಿ ಸುಧಾರಣೆ ಮಾಡುವಂತೆ ಹೇಳಿದ್ದಾರೆ. ಅಂದರೆ ಬಿಬಿಎಂಪಿಯನ್ನು ಪುನಾರಚನೆ ಮಾಡುವುದಕ್ಕಿಂತ ಪುನರ್ ಸುಧಾರಣೆ ಮಾಡಬೇಕು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ರಾಮಚಂದ್ರಪ್ಪ ಅವರು ಮಾತನಾಡಿ, ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗಳಿಸಿದವರನ್ನು ಸರ್ಕಾರ ರಚಿಸಲು ರಾಜ್ಯಪಾಲರು ಅಥವಾ ರಾಷ್ಟ್ರಪತಿ ಆಹ್ವಾನ ನೀಡುತ್ತಾರೆ. ಆದರೆ ಬಿಬಿಎಂಪಿಯಲ್ಲಿ ಅವಕಾಶ ಇಲ್ಲ. ನಿಗದಿಯಾದ ದಿನಾಂಕದಂದು ಮೇಯರ್ ಸ್ಥಾನಕ್ಕೆ ಎಲ್ಲ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಾರೆ. ಯಾರಿಗೆ ಹೆಚ್ಚು ಸದಸ್ಯರ ಬೆಂಬಲ ಇರುತ್ತದೋ ಅವರು ಆಯ್ಕೆಯಾಗುತ್ತಾರೆ. ಬಿಜೆಪಿಯವರು ಹೇಡಿಗಳಂತೆ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಅರ್ಥಹೀನ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT