ಮಧುಬನಿಯ ಜ್ಞಾನೇಶ್ ಮಿಶ್ರಾರ ಹುಲಿಗಳ ಚಿತ್ರಪ್ರದರ್ಶನದಲ್ಲಿ ಫೋಟೋಶೂಟ್. 
ಜಿಲ್ಲಾ ಸುದ್ದಿ

ಕಬ್ಬನ್‍ನಲ್ಲಿ ವಿದ್ಯಾರ್ಥಿಗಳ ಬೀದಿ ನಾಟಕ

ಕಬ್ಬನ್ ಉದ್ಯಾನದಲ್ಲಿ ಈ ಭಾನುವಾರ ಬೀದಿ ನಾಟಕಗಳದ್ದೇ ವಿಶೇಷ, ಮೂರು ವಿಭಿನ್ನ ವಿಷಯಕ್ಕೆ ಸಂಬಂಧಿಸಿದಂತೆ ನಾಟಕಗಳು ಪ್ರದರ್ಶನಗೊಂಡವು...

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ಈ ಭಾನುವಾರ ಬೀದಿ ನಾಟಕಗಳದ್ದೇ ವಿಶೇಷ, ಮೂರು ವಿಭಿನ್ನ ವಿಷಯಕ್ಕೆ ಸಂಬಂಧಿಸಿದಂತೆ ನಾಟಕಗಳು ಪ್ರದರ್ಶನಗೊಂಡವು.

ಮೌಂಟ್ ಕಾರ್ಮೆಲ್ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಪೋಷಕಾಂಶದ ವಾರ ಪ್ರಯುಕ್ತ ಜಾಗೃತಿ ನಾಟಕ ನಡೆದರೆ ಲೋಹಯುಕ್ತ ಗಣಪನನ್ನು ಬಳಸಿ ಪರಿಸರ ನಾಶ ಮಾಡಬೇಡಿ, ಬದಲಿಗೆ ಪರಿಸರ ಸ್ನೇಹಿ ಗಣಪನನ್ನು ಆರಾಧಿಸಿ ಜನರ ಜೀವ ಉಳಿಸಿ ಎಂದು ಸಂದೇಶ ಸಾರುವ ಬೀದಿ ನಾಟಕವನ್ನು ವಿಜಯ್, ತಂಡದವರು ಪ್ರದರ್ಶಿಸಿದರು.

ಸಮಾಜದಲ್ಲಿ ಮಹಿಳೆಯ ಮೇಲಾಗುತ್ತಿರುವ ಅತ್ಯಾಚಾರ, ದೌರ್ಜನ್ಯ, ಮಕ್ಕಳ ನಿಂದನೆಯಂತಹ ಕ್ರೌರ್ಯ ತಡೆಗೆ ಜಾಗೃತಿ ಕಾರ್ಯಕ್ರಮವಾಗಿ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿಗಳು ಬೀದಿ ನಾಟಕ ನಡೆಸಿದರು. ಕಳೆದ ವಾರ ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತು ಮ್ಯಾಜಿಕ್ ಷೋ ನಡೆದರೆ ಈ ಬಾರಿ ಜೇಮ್ಸ್ ಜಾರ್ಜ್ ಅವರಿಂದ ಮ್ಯಾಜಿಕ್ ಷೋ ನಡೆಯಿತು.

ಅಕ್ಷಯ ಫೌಂಡೇಶನ್ ಸಹಯೋಗದೊಂದಿಗೆ ಡಾ.ಎಚ್.ಎಸ್.ನಾರಾಯಣ ಅವರಿಂದ ಕನ್ನಡ ಸಾಹಿತ್ಯಕ್ಕೆ ಬೀಚಿ ಕೊಡುಗೆ ಕುರಿತು ಉಪನ್ಯಾಸ ನಡೆಯಿತು. ಯುವಕರ ಒಂದು ತಂಡ ಸ್ವಯಂ ಪ್ರೇರಿತರಾಗಿ ಸಂಗೀತ ಉಪಕರಣಗಳೊಂದಿಗೆ ಕೆಲವು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಳೆದ ವಾರಕ್ಕಿಂತ ಈ ವಾರ ಅತಿ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಮಧುಬನಿಯ ಜ್ಞಾನೇಶ್ ಮಿಶ್ರಾ ಅವರು ಹುಲಿ ಕುರಿತು ಚಿತ್ರಕಲಾ ಪ್ರದರ್ಶನ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT