(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ರು.30 ಲಕ್ಷದ ಚಿನ್ನಾಭರಣ ನಾಪತ್ತೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎಎಲ್) ಕೇರಳದ ಕೊಚ್ಚಿಗೆ ತೆರಳುತ್ತಿದ್ದ ಮಹಿಳೆಯೊಬ್ಬರ ರು.30 ಲಕ್ಷ ಮೌಲ್ಯದ ಚಿಭರಣಗಳು ಕಾಣೆಯಾಗಿವೆ...

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎಎಲ್) ಕೇರಳದ ಕೊಚ್ಚಿಗೆ ತೆರಳುತ್ತಿದ್ದ ಮಹಿಳೆಯೊಬ್ಬರ ರು.30 ಲಕ್ಷ ಮೌಲ್ಯದ ಚಿಭರಣಗಳು ಕಾಣೆಯಾಗಿವೆ.

ಫ್ರೇಜರ್‍ಟೌನ್ ನಿವಾಸಿಯಾಗಿರುವ ನಿರ್ಮಲಾ ಜೇಮ್ಸ್ ಅವರು ಆ.28ರಂದು ಕೆಐಎಎಲ್ ಮೂಲಕ ಕೊಚ್ಚಿಗೆ ತೆರಳಿದ್ದಾರೆ. ಕೊಚ್ಚಿಗೆ ಹೋದ ನಂತರ ತಮ್ಮ ಬ್ಯಾಗ್‍ನಲ್ಲಿದ್ದ ಚಿನ್ನಾಭರಣಗಳು ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಎಲ್ಲೆಡೆ ಹುಡುಕಾಡಿದರೂ ಕಾಣಿಸಿಲ್ಲ. ಅಲ್ಲದೇ ಕೊಚ್ಚಿ ಏರ್‍ಪೋರ್ಟ್‍ನ ಅಧಿಕಾರಿಗಳ ಸಹಾಯವನ್ನು ಕೋರಿದ್ದರೂ ಚಿನ್ನಾಭರಣ ಪತ್ತೆಯಾಗಲಿಲ್ಲ.

ಹೀಗಾಗಿ, ಫ್ರೇಜರ್‍ಟೌನ್‍ನ ತನ್ನ ಮನೆಯಲ್ಲೇ ಬಿಟ್ಟು ಬಂದಿರಬಹುದು ಎಂದು ಭಾವಿಸಿ ಮಗಳು ಮೇಘಾ ಜೇಮ್ಸ್ ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಹೀಗಾಗಿ, ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಚಿನ್ನಾಭರಣ ಕಾಣಿಸಿಲ್ಲ. ಅಂತಿಮವಾಗಿ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ಏರ್‍ಪೋರ್ಟ್‍ಗೆ ತರಲಾಗಿತ್ತು.

ಅಲ್ಲಿಂದಲೇ ಬ್ಯಾಗ್ ಕಾಣೆಯಾಗಿದೆ ಎಂಬುದನ್ನು ನಿರ್ಮಲಾ ಅವರು ಮನವರಿಕೆ ಮಾಡಿಕೊಂಡಿದ್ದಾರೆ. ಬಳಿಕ ಮಗಳಿಗೆ ಕರೆ ಮಾಡಿ ಪೊಲೀಸ್ ಠಾಣೆಗೆ ದೂರು ನೀಡುವಂತೆ ಹೇಳಿದರು. ಅದರಂತೆ ಮಗಳು ಮೇಘಾ ಜೆಮ್ಸ್ ಅವರು ಶನಿವಾರ (ಸೆ.5) ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಿರ್ಮಲಾ ಅವರು ಆಭರಣಗಳನ್ನು ಏರ್ ಪೋರ್ಟ್‍ನಲ್ಲಿಟ್ಟು ಮರೆತು ಹೋಗಿದ್ದರಾ ಅಥವಾ ಕಳವಾಗಿದೆಯಾ? ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT