ಜಂಬೂ ಸವಾರಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ವಿಶ್ವವಿಖ್ಯಾತ ಜಂಬೂ ಸವಾರಿಗೆ ರು. 89 ಲಕ್ಷ ವಿಮೆ

ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ಜಿಲ್ಲಾ ಆಡಳಿತ ಬರೋಬ್ಬರಿ 89 ಲಕ್ಷ ರುಪಾಯಿಗಳ...

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ಜಿಲ್ಲಾ ಆಡಳಿತ ಬರೋಬ್ಬರಿ 89 ಲಕ್ಷ ರುಪಾಯಿಗಳ ವಿಮೆ ಮಾಡಿಸಿದೆ.

ಜಂಬೂ ಸವಾರಿಯಲ್ಲಿ ಭಾಗವಹಿಸುವ ಅರ್ಜುನ್ ನೇತೃತ್ವದ ಮಾವುತರು, ಕಾವಾಡಿಗಳು ಹಾಗೂ ಆನೆಗಳಿಂದ ಉಂಟಾಗಬಹುದಾದ ಆಸ್ತಿ ಮತ್ತು ಜೀವಹಾನಿ ಪರಿಹಾರಕ್ಕಾಗಿ ಒಟ್ಟು 89 ಲಕ್ಷ ರುಪಾಯಿಗಳ ವಿಮೆ ಮಾಡಿಸಲಾಗಿದೆ.

ಇದು ಅಲ್ಪಾವಧಿಯ ವಿಮೆಯಾಗಿದ್ದು, ಸೆಪ್ಟೆಂಬರ್ 3ರಿಂದ ಅಕ್ಟೋಬರ್ 30ರವರೆಗೆ ಜಾರಿಯಲ್ಲಿರುತ್ತದೆ. ಈ ಸಂಬಂಧ ಜನರಲ್ ವಿಮಾ ಕಂಪನಿಗೆ 55 ಸಾವಿರ ರುಪಾಯಿ ಪ್ರಿಮಿಯಂ ಕಟ್ಟಲಾಗಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಕಮಲಾ ಅವರು ತಿಳಿಸಿದ್ದಾರೆ.

ಈ ಬಾರಿ ಅರ್ಜುನ್ ನೇತೃತ್ವದಲ್ಲಿ 12 ಆನೆಗಳು ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿದ್ದು,  ಗಜಪಡೆಗೆ 35 ಲಕ್ಷ ರು., ಆನೆಗಳ ಉಸ್ತುವಾರಿ ನೋಡಿಕೊಳ್ಳಲು ಆಗಮಿಸಿರುವ 24 ಮಂದಿ ಮಾವುತ ಹಾಗೂ ಕಾವಾಡಿಗಳಿಗೆ 24 ಲಕ್ಷ ರು. ಹಾಗೂ ಆನೆಗಳಿಂದ ಉಂಟಾಗಬಹುದಾದ ಆಸ್ತಿಪಾಸ್ತಿ ನಷ್ಟಕ್ಕೆ 30 ಲಕ್ಷ ರುಪಾಯಿ ವಿಮೆ ಮಾಡಿಸಲಾಗಿದೆ.

ಎರಡು ತಿಂಗಳ ಕಾಲ ಬೆಳಗ್ಗೆ-ಸಂಜೆ ಜಂಬೂಸವಾರಿ ನಡೆಯುವ ಮಾರ್ಗದಲ್ಲಿ, ಆರಮನೆ ಬಳಿ ಆನೆಗಳ ಜಂಬೂ ಸವಾರಿ ತಾಲೀಮು ನಡೆಸುವ 12 ಮಾವುತರು ಹಾಗೂ 12 ಕಾವಾಡಿಗಳಿಗೆ ತಲಾ 1 ಲಕ್ಷ ರು. ನಂತೆ 24 ಲಕ್ಷ ರು. ವಿಮೆ ಮಾಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT