ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮಹದಾಯಿ ಹೋರಾಟಕ್ಕೆ ಕೇಂದ್ರ ಸಮಿತಿ ರಚನೆ

ಹುಬ್ಬಳ್ಳಿ ಕಳಸಾ ಬಂಡೂರಿ ಯೋಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ದಿಕ್ಕು ತಪ್ಪದಂತೆ ತಡೆಯಲು ಮತ್ತು ವಿವಿಧ ಸಂಘಟನಗಳು ಒಂದೇ ವೇದಿಕೆಯಡಿ ಹೋರಾಟ...

ಹುಬ್ಬಳ್ಳಿ ಕಳಸಾ ಬಂಡೂರಿ ಯೋಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ದಿಕ್ಕು ತಪ್ಪದಂತೆ ತಡೆಯಲು ಮತ್ತು ವಿವಿಧ ಸಂಘಟನಗಳು ಒಂದೇ ವೇದಿಕೆಯಡಿ ಹೋರಾಟ ನಡೆಸಲು ಕೇಂದ್ರ ಸಮನ್ವಯ ಸಮಿತಿ ರಚಿಸಲು ನಿರ್ಧರಿಸಲಾಗಿದೆ.

ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಚಳವಳಿ ಏಕತೆ ಹಾಗೂ ಮುಂದಿನ ಹೋರಾಟ ರೂಪಿಸಲು ರೈತ, ಕಾರ್ಮಿಕ, ಕನ್ನಡಪರ ಮತ್ತು ದಲಿತ ಸಂಘಟನೆಗಳು ಮಂಗಳವಾರ ಇಲ್ಲಿನ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ದಿಕ್ಸೂಚಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಮುಂಬರುವ ದಿನಗಳಲ್ಲಿ ಇದರ ಹೋರಾಟ ಈ ಸಮಿತಿ ತೆಗೆದುಕೊಳ್ಳುವ ನಿರ್ಣಯದಂತೆ ನಡೆಯಲಿದೆ. ಇದರಡಿ ಸಂಚಾಲಕ ಸಮಿತಿ, ಮಾರ್ಗದರ್ಶಕ ಸಮಿತಿ, ಕಾನೂನು ಸಮಿತಿ ಹಾಗೂ ತಾಲೂಕು ಸಮಿತಿ ಎಂಬ 4 ಸಮಿತಿಗಳು ಕಾರ್ಯನಿರ್ವಹಿಸಲಿವೆ. ಈ ಸಮಿತಿಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರನ್ನು ಪದಾ„ಕಾರಿಗಳಾಗಿ ನೇಮಿಸಲು ನಿರ್ಧರಿಸಲಾಗಿದ್ದು, ಮಾರ್ಗದರ್ಶಕ ಸಮಿತಿಗೆ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಹಾಗೂ ಕಾಡಯ್ಯ ಹಿರೇಮಠ ಅವರನ್ನು ನೇಮಿಸಲಾಗಿದೆ.

ಕಳಸಾ ಬಂಡೂರಿ ಹೋರಾಟದಲ್ಲಿ ರಾಜಕೀಯ ಪ್ರವೇಶವಾಗಿದೆ. ನಾನಾ ಪಕ್ಷಗಳು ಹೋರಾಟದಲ್ಲಿ ಪಾಲ್ಗೊಂಡು ಹೋರಾಟದ ದಾರಿ ತಪ್ಪಿಸುತ್ತಿವೆ. ರೈತರನ್ನು ಒಡೆದಾಳಲು ಮುಂದಾಗಿದ್ದಾರೆ. ಇದರೊಟ್ಟಿಗೆ ಯೋಜನೆಯ ಅನುಷ್ಠಾನಕ್ಕಾಗಿ ಅಲ್ಲಲ್ಲಿ ಹೋರಾಟ ನಡೆಯುತ್ತಿರುವುದರಿಂದ ಹೋರಾಟ ಕಾವು ಳೆದುಕೊಳ್ಳುವ ಸಾಧ್ಯತೆಯುಂಟು. ಹೀಗಾಗಿ, ಸರ್ಕಾರದ ಮೇಲೆ ಯೋಜನೆಯ ಅನುಷ್ಠಾನಕ್ಕೆ ಒತ್ತಡ ಹೆಚ್ಚಿಸಲು ಒಗ್ಗಟ್ಟಿನ ಹೋರಾಟದ ಅಗತ್ಯ ಮನಗಂಡು ಈ ಸಮಿತಿ ರಚಿಸಲಾಗಿದೆ. ದಿಕ್ಸೂಚಿ ಸಭೆಗೆ ಚಾಲನೆ ನೀಡಿದ ನಾಡೋಜ ಡಾ.ಪಾಪು ಸಮಿತಿ ರಚನೆ ಅಗತ್ಯವಿದೆ ಎಂದು ಸಭೆಯ ಗಮನ ಸೆಳೆದರು.

ಈ ಸಮಿತಿಯು ಹೋರಾಟದ ರೂಪುರೇಷೆ ನಿರ್ಧರಿಸಬೇಕು. ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು. ಏಕಮುಖ ಹೋರಾಟಕ್ಕೆ ಎಲ್ಲರೂ ಇಳಿಯಬೇಕು. ಪಕ್ಷ, ರಾಜಕಾರಣ ಬದಿಗೊತ್ತಿ ರೈತರ ಹಿತ ಸಾಧನೆಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು. ಸಭೆಯಲ್ಲಿ ಹಕ್ಕೊತ್ತಾಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT