ಕೃಷ್ಣ ಭೈರೇಗೌಡ 
ಜಿಲ್ಲಾ ಸುದ್ದಿ

ಬೆಳೆ ಹಾನಿ ಬರಪೀಡಿತ ಪ್ರದೇಶ ಪರಿಶೀಲಿಸಿದ ಕೃಷ್ಣ ಭೈರೇಗೌಡ

ಭೀಕರ ಬರಗಾಲದಿಂದ ರಾಜ್ಯದಲ್ಲಿ ರೂ.11 ಸಾವಿರ ಕೋಟಿ ಮೌಲ್ಯದ 25 ಲಕ್ಷ ಹೆಕ್ಟೇರ್ನಷ್ಟು ಬೆಳೆ ಹಾನಿಯಾಗಿದೆ. ಬರ ಪರಿಸ್ಥಿತಿ ನಿಭಾಯಿಸಲು ....

ಬೆಳಗಾವಿ: ಭೀಕರ ಬರಗಾಲದಿಂದ ರಾಜ್ಯದಲ್ಲಿ ರೂ.11 ಸಾವಿರ ಕೋಟಿ ಮೌಲ್ಯದ 25 ಲಕ್ಷ ಹೆಕ್ಟೇರ್ನಷ್ಟು ಬೆಳೆ ಹಾನಿಯಾಗಿದೆ. ಬರ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರದಿಂದ ರೂ. 3050 ಕೋಟಿ ನೆರವು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಮಂಗಳವಾರ ಬೈಲಹೊಂಗಲ ತಾಲೂಕಿನ ಮೇಕಲಮರಡಿ ಮತ್ತು ಗೋಕಾಕ ತಾಲೂಕಿನ ಅರಬಾವಿಯಲ್ಲಿ ಬರಕ್ಕೆ ಹಾನಿಯಾದ ಬೆಳೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ 63 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, 55 ಲಕ್ಷ ಹೆಕ್ಟೇರ್ ನಷ್ಟು ಮಾತ್ರ ಬಿತ್ತನೆ ಕಾರ್ಯ ನಡೆದಿದೆ. ಅದರಲ್ಲಿ 25 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಹಾನಿಗೀಡಾಗಿವೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ ಎಂದರು. ಈಗಾಗಲೇ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕಂದಾಯ ಇಲಾಖೆ ಬೆಳೆಹಾನಿ ಕುರಿತು ಜಂಟಿಯಾಗಿ ಸರ್ವೆ ಕಾರ್ಯ ಕೈಗೊಂಡಿದ್ದು, ಶೇ. 70ರಷ್ಟು ಸರ್ವೆಯಾಗಿದೆ. ಇನ್ನು ಒಂದು ವಾರದಲ್ಲಿ ಪೂರ್ಣಗೊಳ್ಳಲಿದೆ. ಬರ ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಕನಿಷ್ಠ ರೂ. 1500 ಕೋಟಿ ಅನುದಾನ ಬರಬೇಕಿದೆ ಎಂದು ತಿಳಿಸಿದರು.

ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ರೂ. 103 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಸರ್ಕಾರ ರೂ. 360 ಕೋಟಿ ವೆಚ್ಚ ಮಾಡಿದೆ. ಬೀಕರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಿದೆ. ಕುಡಿವ ನೀರಿನ ಸಮಸ್ಯೆಯೂ ಉಂಟಾಗಿದೆ. ಕುಡಿವ ನೀರಿನ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಈಗಾಗಲೇ ರೂ. 165 ಕೋಟಿ ಬಿಡುಗಡೆ ಮಾಡಿದೆ. 136 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಪ್ರತಿಯೊಂದು ತಾಲೂಕಿಗೆ ತಲಾ ರೂ. 50 ಲಕ್ಷ ಬಿಡುಗಡೆ ಮಾಡಲಾಗಿದೆ. ಅಲ್ಲದೇ, ಸಮಸ್ಯಾತ್ಮಕ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ರೂ. 25 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT